ರೈಲು ಬರುತ್ತಿದ್ದಂತೆ ತಂದೆ ಮಗ ಇಬ್ಬರು ರೈಲ್ವೆ ಹಳಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮುಂಬೈನ ಪಾಲ್ಘರ್ ಜಿಲ್ಲೆಯ ಭಾಯಂದರ್ ರೈಲ್ವೆ ನಿಲ್ದಾಣದ ಬಳಿ ಈ ಘಟನೆ ನಡೆದಿದೆ. ಜುಲೈ 09 ರಂದು ಈ ಹೃದಯವಿದ್ರಾವಕ ಘಟನೆ ನಡೆದಿದ್ದು, ಭಾಯಂದರ್ ರೈಲ್ವೆ ನಿಲ್ದಾಣದ ಪ್ಲಾಟ್ಫಾರ್ಮ್ ನಂ.6 ರ ಮುಂಭಾಗದಲ್ಲಿ ಇರುವಂತಹ ಹಳಿಗೆ ತಲೆಕೊಟ್ಟು ತಂದೆ ಮಗ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ದೃಶ್ಯ ರೈಲ್ವೆ ನಿಲ್ದಾಣದಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ವರದಿಗಳ ಪ್ರಕಾರ ವಸಾಯಿಯ ನಿವಾಸಿಗಳಾದ ತಂದೆ ಹರೀಶ್ ಮೆಹ್ತಾ ಮತ್ತು ಮಗ ಜೈ ಮೆಹ್ತಾ ವಿರಾರ್ನಿಂದ ಚರ್ಚ್ಗೇಟ್ಗೆ ಹೋಗುತ್ತಿದ್ದ ಲೋಕಲ್ ಟ್ರೈನ್ಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡವರು. ಈ ಇಬ್ಬರ ಮೃತ ದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದ್ದು, ತಂದೆ ಮಗನ ಆತ್ಮಹತ್ಯೆಯ ನಿಖರವಾದ ಕಾರಣ ಏನು ಎಂಬುದು ಇನ್ನೂ ತಿಳಿದು ಬಂದಿಲ್ಲ.