ಹಿಂದುಳಿದ ಕಲ್ಯಾಣ ಕರ್ನಾಟಕ ಪ್ರದೇಶದ ಪ್ರಮುಖ ಜಿಲ್ಲೆಯಾದ ರಾಯಚೂರಿನಲ್ಲಿ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (ಏಮ್ಸ್) ಸ್ಥಾಪಿಸಬೇಕೆಂಬ ಬೇಡಿಕೆಯನ್ನು ರಾಜ್ಯ ಸರ್ಕಾರ ಮತ್ತೊಮ್ಮೆ ಕೇಂದ್ರ ಸರ್ಕಾರದ ಮುಂದೆ ಪುನರುಚ್ಚರಿಸಿದೆ. ರಾಯಚೂರು ಉಸ್ತುವಾರಿ ಸಚಿವ, ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಸಚಿವ ಡಾ. ಶರಣಪ್ರಕಾಶ ಪಾಟೀಲ್ ಅವರು ಶುಕ್ರವಾರ ದೆಹಲಿಯಲ್ಲಿ ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ ಅವರನ್ನು ಭೇಟಿ ಮಾಡಿ ಶೀಘ್ರವೇ ಏಮ್ಸ್ ಮಂಜೂರು ಮಾಡುವಂತೆ ಒತ್ತಾಯಿಸಿದ್ದಾರೆ.