ಬೆಳಗಾವಿ ಜಿಲ್ಲೆಯಲ್ಲಿ ಇಂದು ವಂದೇ ಭಾರತ್ ರೈಲು ಉದ್ಘಾಟನೆ ಮಾಡುತ್ತೇನೆ. ಕೆಲ ದಿನಗಳ ನಂತರ ಮತ್ತೊಂದು ರೈಲು ಬೆಳಗಾವಿಗೆ ಬರಲಿದೆ ಎಂದು ಕೇಂದ್ರ ರೈಲ್ವೆ ಸಚಿವ ವಿ. ಸೋಮಣ್ಣ ಹೇಳಿದರು.
ವಂದೇ ಭಾರತ್ ರೈಲು ಉದ್ಘಾಟನೆಗೂ ಮುನ್ನ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇಂದು ಪ್ರಧಾನಿ ನರೇಂದ್ರ ಮೋದಿ 7 ರೈಲು ಉದ್ಘಾಟನಾ ಮಾಡಲಿದ್ದಾರೆ. ಸಂಜೆ ನಾಲ್ಕು ಗಂಟೆಗೆ ಕೊಲ್ಹಾಪುರ-ಪುಣೆ ರೈಲು ಉದ್ಘಾಟನೆ ಮಾಡುತ್ತೇನೆ. ಬೆಳಗಾವಿಯಲ್ಲಿ ಪುಣೆಯಿಂದ ವಂದೇ ಭಾರತ್ ರೈಲು ರಿಸಿವ್ ಮಾಡುತ್ತೇನೆ ಎಂದರು.
ತಾಂತ್ರಿಕ ಸಮಸ್ಯೆ ನೆಪವೊಡ್ಡಿ ಬೆಳಗಾವಿ- ಬೆಂಗಳೂರು ವಂದೇ ಭಾರತ್ ರೈಲು ತಡೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು ಈಗ ಬೆಳಗಾವಿಗೆ ಮಂಜೂರಾಗಿದ್ದ ವಂದೇ ಭಾರತ್ ರೈಲು ಹುಬ್ಬಳ್ಳಿಗೆ ವಿಸ್ತರಣೆ ಮಾಡಲಾಗಿದೆ. ನಾನು ಬಂದು ಮೂರು ತಿಂಗಳು ಆಗಿದೆ. ಹಳೆಯದನ್ನು ಕೆದಕಿ ಕೆಲಸ ಮಾಡಲು ಆಗಲ್ಲ. ಬೆಳಗಾವಿಗೆ ಇಂದು ವಂದೇ ಭಾರತ್ ರೈಲು ಉದ್ಘಾಟನಾ ಮಾಡುತ್ತೇನೆ. ಕೆಲ ದಿನಗಳಲ್ಲಿ ಮತ್ತೊಂದು ರೈಲು ಬೆಳಗಾವಿಗೆ ಬರಲಿದೆ ಎಂದಿದ್ದಾರೆ.