ಜೆಡಿಎಸ್ ನಾಯಕರು ಸಿದ್ದರಾಮಯ್ಯ ಅವರಿಗೆ ಬೀಗ ಹಾಕಿ ಕೂರಿಸಿದ್ದರು. ಸಿದ್ದರಾಮಯ್ಯರನ್ನ ಪಕ್ಷದಿಂದಲ್ಲೇ ಅಮಾನತು ಮಾಡಿದ್ದರು. ಆದರೆ, ಅವರ ಯೋಗ ಅಲ್ಲಿ ಬರೆದಿರಲಿಲ್ಲ, ಇಲ್ಲಿ ಬರೆದಿತ್ತು ಅಂತ ಸಂಸದ ಡಿ.ಕೆ. ಸುರೇಶ್ ಹೇಳಿದ್ದಾರೆ. ರಾಮನಗರದಲ್ಲಿ ಮಾತನಾಡಿದ ಡಿ.ಕೆ.ಸುರೇಶ್, ಸಿದ್ದರಾಮಯ್ಯ ಮೂಲ ಕಾಂಗ್ರೆಸ್ ಪಕ್ಷವಲ್ಲ. ಬೇರೆ ಪಕ್ಷದಿಂದ ಬಂದವರು, ಆದರೂ, ನಾವು ಅವರಿಗೆ ಅವಕಾಶ ಮಾಡಿಕೊಟ್ಟಿದ್ದೇವೆ. 2ನೇ ಬಾರಿಗೆ ಮುಖ್ಯಮಂತ್ರಿ ಆಗಿ, ನಮ್ಮ ನಾಯಕರಾಗಿದ್ದಾರೆ ಎಂದು ಹೇಳಿದ್ರು. ಹಾಗೆಯೇ ನಿಮ್ಮ ಯೋಗ ಸಹ ಬರೆದಿರಬಹುದು. ಯಾರನ್ನೂ ಅಡ್ಡಿ ಮಾಡಬೇಡಿ, ಪಕ್ಷ ಬೆಳೆಯುವ ನಿಟ್ಟಿನಲ್ಲಿ ಕೆಲಸ ಮಾಡಿ ಎಂದು ಕಾರ್ಯಕರ್ತರಿಗೆ ಸಲಹೆ ನೀಡಿದರು.