ಶಸ್ತ್ರಚಿಕಿತ್ಸೆ ಬಳಿಕ ಅಮೆರಿಕದಲ್ಲಿ ವಿಶ್ರಾಂತಿ ಮೂಡ್ನಲ್ಲಿರುವ ನಟ ಶಿವರಾಜ್ಕುಮಾರ್ ಕೊನೆಗೂ ತವರಿಗೆ ವಾಪಸ್ ಆಗುವ ಸಿಹಿ ಸುದ್ದಿ ಹಂಚಿಕೊಂಡಿದ್ದಾರೆ. ಇದೇ ಜ.26 ರ ಗಣರಾಜ್ಯೋತ್ಸವದಂದು ಬೆಂಗಳೂರಿಗೆ ವಾಪಸ್ ಆಗುವುದಾಗಿ ಶಿವಣ್ಣ ತಿಳಿಸಿದ್ದಾರೆ.
ಬೆಂಗಳೂರಿಗೆ ಬರುವ ಬಗ್ಗೆ ನಟ ಶಿವಣ್ಣ ವೀಡಿಯೋ ಮಾಡಿ ಫ್ಯಾನ್ಸ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ನಿಮ್ಮೆಲ್ಲರ ಪ್ರೀತಿ ಹಾರೈಕೆಗೆ ಚಿರಋಣಿ ಎಂದು ಅಭಿಮಾನಿಗಳಿಗೆ ನಟ ಕೃತಜ್ಞತೆ ಸಲ್ಲಿಸಿದ್ದಾರೆ.
ಜನವರಿ 26 ಗಣರಾಜ್ಯೋತ್ಸವದ ದಿನ ಬೆಂಗಳೂರಿಗೆ ಬರುವುದಾಗಿ ನಟ ಶಿವರಾಜಕುಮಾರ್ ವಿಡಿಯೋ ಮೂಲಕ ಅಭಿಮಾನಿಗಳ ಜೊತೆ ಖುಷಿ ವಿಷಯ ಹಂಚಿಕೊಂಡಿದ್ದಾರೆ. ಅಲ್ಲದೆ ಗಣರಾಜ್ಯೋತ್ಸವದ ದಿನ ಭೈರತಿ ರಣಗಲ್ ಚಿತ್ರ ಬರ್ತಿದೆ. ಈ ವಿಷಯವೂ ಕೂಡ ಖುಷಿ ತಂದಿದೆ. ಎಲ್ಲರೂ ಸಿನಿಮಾ ನೋಡಿ ಅಂತಲೇ ಶಿವಣ್ಣ ಕೇಳಿಕೊಂಡಿದ್ದಾರೆ.ಅದೇ ದಿನ ಜೀ ಕನ್ನಡ ವಾಹಿನಿಯಲ್ಲಿ ಭೈರತಿ ರಣಗಲ್ ಚಿತ್ರ ಪ್ರವಾರವಾಗಲಿದೆ. ಆ ಚಿತ್ರವನ್ನು ನೋಡಿ ಎಂದು ಹೇಳಿದ್ದಾರೆ. ಕ್ಯಾನ್ಸರ್ ಸರ್ಜರಿಗೆ ಒಳಗಾಗಿದ್ದ ಖ್ಯಾತ ನಟ ಶಿವರಾಜ್ ಕುಮಾರ್ ಶಸ್ತ್ರಚಿಕಿತ್ಸೆ ಯಶಸ್ಸಿನ ಬೆನ್ನಲ್ಲೇ ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರು ಅಮೇರಿಕಾದಲ್ಲಿ ಕ್ಯಾನ್ಸರ್ ಚಿಕಿತ್ಸೆಗೆ ಒಳಗಾಗಿದ್ದು, ಇತ್ತೀಚೆಗೆ ಸರ್ಜರಿ ಕೂಡ ಸಕ್ಸಸ್ ಆಗಿತ್ತು. ಈ ಬಗ್ಗೆ ವಿಡಿಯೋ ಹಂಚಿಕೊಂಡಿದ್ದ ಶಿವಣ್ಣ ನಾನು ಆರೋಗ್ಯವಾಗಿದ್ದೇನೆ. ಆದಷ್ಟು ಬೇಗ ನಿಮ್ಮ ಮುಂದೆ ಬರುತ್ತೇನೆ ಎಂದಿದ್ದರು. ಇದೀಗ ಅವರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು ಬೆಂಗಳೂರಿಗೆ ಬರುವ ದಿನಾಂಕವನ್ನು ತಿಳಿಸಿದ್ದಾರೆ.
ಅಮೇರಿಕಾದ ಮಿಯಾಮಿ ಕ್ಯಾನ್ಸರ್ ಇನ್ಸ್ಟಿಟ್ಯೂಟ್ನಲ್ಲಿ ಶಿವಣ್ಣ ಅವರಿಗೆ ಇತ್ತೀಚೆಗೆ ಸರ್ಜರಿ ನಡೆದಿತ್ತು. ಬಳಿಕ ಅವರಿಗೆ ಎರಡು ಬಾರಿ ಮೆಡಿಕಲ್ ಚೆಕಪ್ ಆಗಿತ್ತು. ಇದೀಗ ಈ ಪ್ರಕ್ರಿಯೆ ಕೂಡ ಪೂರ್ಣಗೊಂಡಿದ್ದು, ಶಿವಣ್ಣ ಕ್ಯಾನ್ಸರ್ನಿಂದ ಗುಣಮುಖರಾಗಿದ್ದಾರೆ.
ಶಿವರಾಜ್ ಕುಮಾರ್ ಬೇಡಿಕೆ ಎಲ್ಲಡೆ ಇದೆ. ಎಲ್ಲ ಕಡೆಗೂ ಶಿವಣ್ಣನ ಫ್ಯಾನ್ಸ್ ಇದ್ದಾರೆ. ಅಮೆರಿಕದ ಮಿಯಾಮಿಯಲ್ಲೂ ಶಿವಣ್ಣನ ಫ್ಯಾನ್ಸ್ ಇದ್ದಾರೆ. ಅದು ಮೊನ್ನೆನೆ ಗೊತ್ತಾಗಿದೆ. ಅಲ್ಲಿಯೇ ಇರೋ ಕನ್ನಡಿಗರು ಬಂದು ಶಿವಣ್ಣನ ಭೇಟಿ ಆಗಿದ್ದಾರೆ. ಅಭಿನಂದಿಸಿದ್ದಾರೆ.ಮಿಯಾಮಿಯಲ್ಲಿ ನಡೆದ ಮೀಟ್ ಆ್ಯಂಡ್ ಗ್ರೀಟ್ ಅಲ್ಲಿ ಶಿವಣ್ಣ ಹಾಡು ಹೇಳಿದ್ದಾರೆ. ಮುತ್ತಣ್ಣ ಚಿತ್ರದ ಟೈಟಲ್ ಟ್ರ್ಯಾಕ್ ಹಾಡಿದ್ದಾರೆ. ರಾಜಕುಮಾರ ಚಿತ್ರದ ಹಾಡನ್ನೂ ಹಾಡಿ ರಂಜಿಸಿದ್ದಾರೆ. ರಾಜಕುಮಾರ್ ಅವರ ಆಕಾಶವೇ ಬೀಳಲಿ ಮೇಲೆ ಹಾಡಿಗೂ ಧ್ವನಿ ಆಗಿದ್ದಾರೆ. ಹೀಗೆ ಅಲ್ಲಿಯ ಜನರನ್ನ ರಂಜಿಸಿದ್ದಾರೆ.
ಗ್ಯಾರಂಟಿ ನ್ಯೂಸ್ ವಾಟ್ಸಾಪ್ ಚಾನೆಲ್ ಫಾಲೋ ಮಾಡಿ:https://whatsapp.com/channel/0029VafyCqRFnSzHn1JWKi1B
ಜೊತೆಯಲ್ಲೇ ಗ್ಯಾರಂಟಿ ನ್ಯೂಸ್ ಸಮುದಾಯವನ್ನು ಸೇರಲು ಈ ಲಿಂಕ್ ಕ್ಲಿಕ್ಕಿಸಿ:https://chat.whatsapp.com/HWayJDSBf9aI06q6jplPgc