ಬೆಂಗಳೂರು ನಗರದ ಜನರಿಗೆ ನೀರಿನ ದರ ಏರಿಕೆಯ ಹೊಸ ಚರ್ಚೆ ಕಾಡುತ್ತಿದೆ. 2014ರ ನಂತರ ಬೆಂಗಳೂರಿನಲ್ಲಿ ನೀರಿನ ದರ ಪರಿಷ್ಕರಣೆಯೇ ಆಗಿಲ್ಲ.ಹೀಗಾಗಿ ಬೆಂಗಳೂರು ಜಲ ಮಂಡಳಿಯು (BWSSB) 7-8 ಪೈಸೆ ನೀರಿನ ದರ ಏರಿಕೆ ಪ್ರಸ್ತಾಪಿಸಿದ್ದಾದರೂ, ನಗರಾಭಿವೃದ್ಧಿ ಸಚಿವ ಡಿ.ಕೆ.ಶಿವಕುಮಾರ್ ಅವರು “ಸದ್ಯಕ್ಕೆ 1 ಪೈಸೆ ಮಾತ್ರ ಏರಿಕೆ ಸಾಕು” ಎಂದು ಹೇಳಿದ್ದಾರೆ. ಮೆಟ್ರೋ, ಬಸ್ ದರ ಏರಿಕೆಯ ನಂತರ ನೀರಿನ ದರವೂ ಹೆಚ್ಚಿದರೆ ಜನರ ಮೇಲೆ ದ್ವಿಮುಖ ಹೊರೆ ಬೀಳುವುದೆಂಬ ಆತಂಕ ಇದರ ಹಿಂದೆ ಇದೆ.ನಗರದ ಶಾಸಕರ ಜತೆ ಚರ್ಚಿಸಿ ಅಂತಿಮ ನಿರ್ಧಾರ ಎಂದ ಡಿಕೆಶಿ
ಶುಕ್ರವಾರ ಶೂನ್ಯವೇಳೆಯಲ್ಲಿ ಕಾಂಗ್ರೆಸ್ ಸದಸ್ಯ ರಾಮೋಜಿಗೌಡ ಅವರು, ಬೇಸಿಗೆ ಆರಂಭವಾಗುತ್ತಿದ್ದು, ಬೆಂಗಳೂರಿನ ಪೂರ್ವ ಭಾಗದಲ್ಲಿ ಕುಡಿಯುವ ನೀರಿನ ಅಭಾವದಿಂದ ಖಾಸಗಿ ಟ್ಯಾಂಕರ್ಗಳು ದುಪ್ಪಟ್ಟು ಹಣದ ಬೇಡಿಕೆ ಇಡುತ್ತಿದ್ದು, ಜನರಿಗೆ ಉಚಿತವಾಗಿ ನೀರು ಪೂರೈಸಬೇಕು ಹಾಗೂ ಕಾವೇರಿ ಸಂಪರ್ಕ ನೀಡಿರುವ ಮನೆಗಳಿಗೆ ಶೀಘ್ರ ನೀರು ಒದಗಿಸಬೇಕು ಎಂದು ಗಮನ ಸೆಳೆದರು.
11 ವರ್ಷಗಳ ನಂತರ ದರ ಪರಿಷ್ಕರಣೆ: ಏಕೆ?
BWSSB ಪ್ರಕಾರ, 2014ರಿಂದ ಇದುವರೆಗೆ ನೀರಿನ ದರವನ್ನು ಪರಿಷ್ಕರಿಸಲಾಗಿಲ್ಲ. ಆದರೆ, ನಗರಕ್ಕೆ ನೀರು ಪಂಪ್ ಮಾಡಲು ಬಳಸುವ ವಿದ್ಯುತ್ ಬಿಲ್ ಪ್ರತಿವರ್ಷ ₹1,000 ಕೋಟಿ ಮೀರುತ್ತಿದೆ. “ನೀರು ಪೂರೈಕೆಗೆ ಉಂಟಾಗುವ ನಷ್ಟವನ್ನು ಸರಿದೂಗಿಸಲು ದರ ಏರಿಕೆ ಅನಿವಾರ್ಯ,” ಎಂದು ಮಂಡಳಿ ವಾದಿಸಿದೆ. ಆದರೆ, ಡಿಸಿಎಂ ಶಿವಕುಮಾರ್ ಅವರು ತಾತ್ಕಾಲಿಕವಾಗಿ 1 ಪೈಸೆ ಏರಿಕೆ ಮಾತ್ರ ಮಾಡಲು ಚಿಂತನೆಯಿದೆ.ನಗರದ “ಶಾಸಕರೊಂದಿಗೆ ಚರ್ಚಿಸಿ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು,” ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಆದರೆ, ನಾವು ಸದ್ಯ ಒಂದು ಪೈಸೆ ಏರಿಕೆ ಮಾಡಲು ಬಿಡುವಾಗ ಅದರ ಮೇಲೆ ಕಾಂಕ್ರೀಟ್ ಹಾಕದಂತೆ ಕಡ್ಡಾಯ ನಿಯಮ ರೂಪಿಸ ಲಾಗುತ್ತಿದೆ ಎಂದು ಡಿಸಿಎಂ ತಿಳಿಸಿದರು. ನೀರಿನ ಸಂಪರ್ಕ ಹಾಗೂ ಟ್ಯಾಂಕರ್ಗಳ ವಿಚಾರವಾಗಿ ಕ್ರಮ ಕೈಗೊಳ್ಳಲಾಗಿದ್ದು, ಟ್ಯಾಂಕರ್ಗಳನ್ನು ನಿಯಂತ್ರಣಕ್ಕೆ ತೆಗೆದುಕೊಳ್ಳಲು ಕ್ರಮ ಕೈಗೊಳ್ಳಲಾಗುವುದು. ಖಾಸಗಿ ಟ್ಯಾಂಕರ್ಗಳದ್ದು ದೊಡ್ಡ ದಂಧೆಯಾಗಿದ್ದು, ಇದಕ್ಕಾಗಿ ಕನಿಷ್ಠ ದರ ನಿಗದಿ ಮಾಡಲಾಗಿದೆ. ಎಲ್ಲಿ ತುರ್ತಾಗಿ ನೀರನ್ನು ಪೂರೈಸ ಬಹುದೋ ಅದಕ್ಕೆ ಕ್ರಮ ಕೈಗೊಳ್ಳಲಾಗುವುದು. ಇದರ ಜತೆಗೆ ಭವಿಷ್ಯದ ಉದ್ದೇಶದಿಂದ ಕಾವೇರಿ 6ನೇ ಹಂತದ ಕುಡಿಯುವ ನೀರಿನ ಯೋಜನೆಗೆ ಪ್ಲಾನ್ ಸಿದ್ದವಾಗಿದ್ದು, ಅದನ್ನು ಸಚಿವ ಸಂಪುಟದ ಮುಂದೆ ಪ್ರಸ್ತಾಪಿಸಿ ಸಾರ್ವಜನಿಕರ ಅಭಿಪ್ರಾಯ ಸಂಗ್ರಹಿಸಲಾಗುವುದು. ಪಾಲಿಕೆ ಬಜೆಟ್ ಕುರಿತ ಸಭೆ ವೇಳೆ ಬೆಂಗಳೂರಿನ ಶಾಸಕರನ್ನು ಕರೆದು ಸಭೆ ಮಾಡಿ ಚರ್ಚಿಸಿ ಅಂತಿಮಗೊಳಿಸಲಾಗುವುದು ಎಂದು ತಿಳಿಸಿದರು.
ಅಂತರ್ಜಲ ವೃದ್ಧಿಗಾಗಿ ಕೆರೆ ತುಂಬಿಸಲು ಕ್ರಮ
ನಗರದಲ್ಲಿ ಅಂತರ್ಜಲ ವೃದ್ಧಿಗೆ ನಗರದ ಎಲ್ಲಾ ಕೆರೆಗಳಿಗೆ ಮಳೆ ನೀರು ತುಂಬಿಸಲು ಮುಂದಾಗಿದ್ದೇವೆ. ಜೊತೆಗೆ ಮಳೆನೀರು ಕೊಯ್ದು ಪದ್ಧತಿಯಲ್ಲಿ 3 ಅಡಿ ಜಾಗ ಬಿಡುವಾಗ ಅದರ ಮೇಲೆ ಕಾಂಕ್ರೀಟ್ ಹಾಕದಂತೆ ಕಡ್ಡಾಯ ನಿಯಮ ರೂಪಿಸ ಲಾಗುತ್ತಿದೆ ಎಂದು ಡಿಸಿಎಂ ತಿಳಿಸಿದರು. ನೀರಿನ ಸಂಪರ್ಕ ಹಾಗೂ ಟ್ಯಾಂಕರ್ಗಳ ವಿಚಾರವಾಗಿ ಕ್ರಮ ಕೈಗೊಳ್ಳಲಾಗಿದ್ದು, ಟ್ಯಾಂಕರ್ಗಳನ್ನು ನಿಯಂತ್ರಣಕ್ಕೆ ತೆಗೆದುಕೊ ಳ್ಳಲು ಕ್ರಮ ಕೈಗೊಳ್ಳಲಾಗು ವುದು. ಖಾಸಗಿ ಟ್ಯಾಂಕರ್ಗಳದ್ದು ದೊಡ್ಡ ದಂಧೆಯಾ ಗಿದ್ದು, ಇದಕ್ಕಾಗಿ ಕನಿಷ್ಠ ದರ ನಿಗದಿ ಮಾಡಲಾಗಿದೆ. ಎಲ್ಲಿ ತುರ್ತಾಗಿ ನೀರನ್ನು ಪೂರೈಸಬಹುದೋ ಅದಕ್ಕೆ ಕ್ರಮ ಕೈಗೊಳ್ಳಲಾಗುವುದು. ಇದರ ಜತೆಗೆ ಭವಿಷ್ಯದ ಉದ್ದೇಶದಿಂದ ಕಾವೇರಿ 6ನೇ ಹಂತದ ಕುಡಿಯುವ ನೀರಿನ ಯೋಜನೆಗೆ ಪ್ಲಾನ್ ಸಿದ್ದವಾಗಿದ್ದು, ಅದನ್ನು ಸಚಿವ ಸಂಪುಟದ ಮುಂದೆ ಪ್ರಸ್ತಾಪಿಸಿ ಸಾರ್ವ ಜನಿಕರ ಅಭಿಪ್ರಾಯ ಸಂಗ್ರಹಿಸಲಾಗುವುದು.