ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ 17 ವ್ಯಕ್ತಿಗಳನ್ನು ದಸ್ತಗಿರಿ ಮಾಡಿ ಪ್ರಕರಣದಲ್ಲಿ ಆರೋಪಿಗಳ ವಿರುದ್ಧ ತನಿಖಾಧಿಕಾರಿಗಳು ಇಲ್ಲಿಯವರೆಗಿನ ತನಿಖೆಯಲ್ಲಿ ಸಂಗ್ರಹಿಸಿರುವ ಪ್ರತ್ಯಕ್ಷ, ಸಾಧರ್ಭಿಕ, ತಾಂತ್ರಿಕ, ವೈಜ್ಞಾನಿಕ ಹಾಗು ಇತರೆ ಸಾಕ್ಷ್ಯಾಧಾರಗಳಿಂದ 17 ಆರೋಪಿತರ ವಿರುದ್ಧ ಮಾನ್ಯ 24ನೇ ಎಸಿಎಂಎಂ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿಯನ್ನು ಸಲ್ಲಿಸಲಾಗುತ್ತಿದ್ದು, ಈ ದೋಷಾರೋಪಣಾ ಪಟ್ಟಿಯಲ್ಲಿ ಒಟ್ಟು 231 ಸಾಕ್ಷಿದಾರರನ್ನು ಒಳಗೊಂಡಂತೆ ಒಟ್ಟು 3991 ಪುಟಗಳುಳ್ಳ 07 ಸಂಪುಟಳುಳ್ಳ 10 ಕಡತಗಳನ್ನು ಒಳಗೊಂಡಿರುತ್ತದೆ.
ಈ ಪ್ರಕರಣದ ತನಿಖೆಯನ್ನು ವಿಜಯನಗರ ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತರಾದ ಚಂದನ್ ಕುಮಾರ್. ಎನ್ ಹಾಗೂ ಅಧಿಕಾರಿ ಮತ್ತು ಸಿಬ್ಬಂದಿಗಳನ್ನು ಒಳಗೊಂಡ ತಂಡ ಆರೋಪಿಗಳನ್ನು ಬಂಧಿಸಿ ಪ್ರಕರಣವನ್ನು ಭೇದಿಸುವಲ್ಲಿ ಯಶಸ್ವಿಯಾಗಿರುತ್ತಾರೆ ಎಂದು ಪೊಲೀಸರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಾಕ್ಷಿಧಾರರ ವಿವರಗಳು:
- ಪ್ರತ್ಯಕ್ಷ ಸಾಕ್ಷಿಧಾರರು – 03
- ಎಫ್ ಎಸ್ ಎಲ್ -08
- ಪಂಚರು -59
- ಇತರೇ ಸರ್ಕಾರಿ ಅಧಿಕಾರಿಗಳು – 08
- ಪೊಲೀಸರು – 56
- 27 ಜನ 164 ಸಿಆರ್ಪಿಸಿ ಅಡಿಯಲ್ಲಿನ ಸಾಕ್ಷಿಧಾರರು ಸೇರಿದಂತೆ
- ಒಟ್ಟು ಸಾಕ್ಷಿಧಾರರು 231