ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿದ್ದು, ಬುಧವಾರದ ವೇಳೆಗೆ ಅದು ಚಂಡಮಾರುತವಾಗಿ ಬದಲಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ಚಂಡಮಾರುತದ ಪರಿಣಾಮ ಪಶ್ಚಿಮ ಬಂಗಾಳ, ಒಡಿಶಾದ ತೀರ ಪ್ರದೇಶಗಳಲ್ಲಿ ಅ.24ರ ರಾತ್ರಿ ಹಾಗೂ 25ರ ಮುಂಜಾನೆ ವೇಳೆ ಹಾದು ಹೋಗಲಿದ್ದು, ಈ ವೇಳೆ 100-110 ಕಿಮೀ ವೇಗದಲ್ಲಿ ಗಾಳಿ ಬೀಸುವ ನಿರೀಕ್ಷೆ ಇದೆ ಎಂದು ಐಎಂಡಿ ಮಾಹಿತಿ ನೀಡಿದೆ. ಈ ಹಿನ್ನೆಲೆಯಲ್ಲಿ ಸೋಮವಾರ ಸಂಜೆಯೊಳಗೆ ದಡಸೇರುವಂತೆ ಮೀನುಗಾರರಿಗೆ ಸೂಚಿಸಲಾಗಿದೆ. ಚಂಡಮಾರುತಕ್ಕೆ ಡಾನಾ ಎಂದು ಹೆಸರಿಡಲಾಗಿದೆ.
ಚಂಡಮಾರುತದ ಪ್ರಭಾವ ಒಡಿಶಾದ ಮೇಲೆ ಅಧಿಕವಾಗಿರಲಿದ್ದು, ಭಾರೀ ಗಾಳಿ ಮಳೆಯಾಗುವ ಸಂಭವವಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಕೆಲ ಪ್ರದೇಶಗಳಿಗೆ ಕೆಂಪು, ಆರೆಂಜ್ ಹಾಗೂ ಯಲ್ಲೋ ಅಲರ್ಟ್ ಘೋಷಿಸಲಾಗಿದೆ. ಮುಂಜಾಗೃತಾ ಕ್ರಮವಾಗಿ ಕೆಲ ಪ್ರದೇಶಗಳಿಂದ ಜನರನ್ನು ಸ್ಥಳಾಂತರಿಸಲಾಗಿದೆ. ರಾಷ್ಟ್ರಪತಿಗಳ 3 ದಿನಗಳ ಒಡಿಶಾ ಭೇಟಿ ಕೂಡಾ ಮುಂದೂಡಲಾಗಿದೆ.
ಇದನ್ನೂ ಓದಿ: ಅಭಿಷೇಕ್ ಬಚ್ಚನ್ ಗೆ ಸಹ ನಟಿ ಜೊತೆ ಅಫೇರ್?