- ಜೂನ್ 3 ರಂದು ವಿಧಾನ ಪರಿಷತ್ ಚುನಾವಣೆ
- ಬಿಜೆಪಿ, ಜೆಡಿಎಸ್ ಮೈತ್ರಿ ನಾಯಕರು ಒಗ್ಗಟ್ಟು ಪ್ರದರ್ಶನ
ಬೆಂಗಳೂರು: ಜೂನ್ 3 ರಂದು ನಡೆಯಲಿರುವ ವಿಧಾನ ಪರಿಷತ್ ಚುನಾವಣೆಗೆ ಬಿಜೆಪಿ, ಜೆಡಿಎಸ್ ಮೈತ್ರಿ ನಾಯಕರು ಒಗ್ಗಟ್ಟು ಪ್ರದರ್ಶನ ಮಾಡಿದ್ದಾರೆ. ಬೆಂಗಳೂರಿನ ಜೆಪಿ ಭವನದ ಜೆಡಿಎಸ್ ಕಚೇರಿ ಆವರಣದಲ್ಲಿ ಮಹತ್ವದ ಸಭೆ ನಡೆಸಿದರು. ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ, ವಿರೋಧ ಪಕ್ಷದ ನಾಯಕ ಆರ್ ಆಶೋಕ, ಮಾಜಿ ಡಿಸಿಎಂ ಅಶ್ವಥ ನಾರಾಯಣ, ಮಾಜಿ ಸಚಿವ ಮುನಿರತ್ನ ಹಾಗೂ ನಿಖಿಲ ಕುಮಾರಸ್ವಾಮಿ ಸೇರಿದಂತೆ ಬೆಂಗಳೂರು ನಗರ, ಗ್ರಾಮಾಂತರ, ರಾಮನಗರದ ಬಿಜೆಪಿ, ಜೆಡಿಎಸ್ ನ ನೂರಾರು ಕಾರ್ಯಕರ್ತರು ಸಭೆಯಲ್ಲಿ ಭಾಗಿಯಾಗಿದ್ದರು. ವಿಧಾನ ಪರಿಷತ್ ನ ಆರು ಕ್ಷೇತ್ರದಲ್ಲಿ ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡುವಂತೆ ಕರೆ ನೀಡಿದರು.