ರಾಜ್ಯದಲ್ಲಿ ದಿನದಿಂದ ದಿನಕ್ಕೆ ಡೆಂಘೀ ಪ್ರಕರಣ ಏರಿಕೆಯಾಗ್ತಿದೆ . ರಾಜ್ಯದಲ್ಲಿ 11 ಸಾವಿರ ಗಡಿ ದಾಟಿರುವ ಡೆಂಘೀ ಪ್ರಕರಣಕ್ಕೆ ಕಡಿವಾಣ ಹಾಕಲು ಆರೋಗ್ಯ ಇಲಾಖೆ ಕ್ರಮ ಕೈಗೊಂಡಿದೆ. ನಗರದ ಸರ್ಕಾರಿ ಆಸ್ಪತ್ರೆ ಗಳಲ್ಲಿ ಡೆಂಘೀಗೆ ಸೂಕ್ತ ಚಿಕಿತ್ಸೆ ನೀಡಲು ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ.
ಕೆಸಿ ಜನರಲ್, ಸಿವಿ ರಾಮನ್, ಜಯನಗರ,ಕೆಆರ್ ಪುರಂ ಜನರಲ್ ಆಸ್ಪತ್ರೆ, ವಾಣಿವಿಲಾಸ ಆಸ್ಪತ್ರೆಗಳಿಗೂ ಕೂಡ ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಿಕೊಳ್ಳಲಾಗಿದೆ. ಡೆಂಘೀಯಿಂದ ಬಳಲ್ತಿರುವವರಿಗೆ ಸೂಕ್ತ ಚಿಕಿತ್ಸೆ ನೀಡಲು ಸೂಚನೆ ನೀಡಲಾಗಿದೆ. ಅಲ್ಲದೆ ರೋಗಿಗಳಿಗೆ ಚಿಕಿತ್ಸೆ ಸಿಗದೆ ಇದ್ದಲ್ಲಿ ಟೋಲ್ ಫ್ರೀ ನಂಬರ್ 18004258330 ಗೂ ದೂರು ಅಥವಾ ಮಾಹಿತಿ ನೀಡಬಹುದು ಎಂದು ಆರೋಗ್ಯ ಇಲಾಖೆಯಿಂದ ಟೋಲ್ ಫ್ರೀ ನಂಬರ್ ಬಿಡುಗಡೆ ಮಾಡಲಾಗಿದೆ.