ಒಂದಿಲ್ಲೊಂದು ಕಾರಣವೊಡ್ಡಿ ಕೇಂದ್ರದ ಜತೆಗೆ ರಾಜ್ಯ ಸರ್ಕಾರ ಸದಾ ಸಂಘರ್ಷದ ಧೋರಣೆ ಪ್ರದರ್ಶಿಸುತ್ತಿದೆ. ಅದೇ ಹಾದಿಯಲ್ಲಿ ಮುಂದುವರಿದು ಜನೌಷಧಿ ಕೇಂದ್ರಗಳನ್ನು ಮುಚ್ಚಲು ಹೊರಟಿರುವುದು ಸರಿಯಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ ವಿಜಯೇಂದ್ರ ಆಕ್ಷೇಪಿಸಿದರು.
ಬೆಂಗಳೂರಿನ ವಸಂತನಗರ ವಾರ್ಡ್ನ ಬೂತ್ನಲ್ಲಿ ರಾಷ್ಟ್ರ ಬಾವುಟ ಹಾರಿಸಿ ಹರ್ ಘರ್ ತಿರಂಗಾ ಅಭಿಯಾನಕ್ಕೆ ಮಂಗಳವಾರ ಚಾನೆ ನೀಡಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿ ಅವರು, ಜನೌಷದಿ ಕೇಂದ್ರಗಳ ಮೂಲಕ ಬಡವರಿಗೆ ಕಡಿಮೆ ದರದಲ್ಲಿ ಔಷಧಿ, ಮಾತ್ರೆ ಸಿಗುತ್ತವೆ. ಸಾಕಷ್ಟು ಜನರು ಪೆಯೋಜನ ಪಡೆದು, ಪ್ರಧಾನಿ ನರೇಂದ್ರ ಮೋದಿಯವರ ಈ ಉಪಕ್ರಮಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ರಾಜ್ಯ ಸರ್ಕಾರ ಏನೋ ಒಂದು ಕಾರಣ ಹೇಳಿ ಜನೌಷಧಿ ಕೇಂದ್ರಗಳನ್ನು ಬಡವರಿಗೆ ಅನ್ಯಾಯ ಮಾಡಿದಂತಾಗುತ್ತದೆ ಎಂದು ಎಚ್ಚರಿಸಿದರು.
ಚನ್ನಪಟ್ಟಣ ವಿಧಾನಸಭಾ ಉಪ ಚುನಾವಣೆಗೆ ಬಿಜೆಪಿ-ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿ ಆಯ್ಕೆ ಎರಡು ಪಕ್ಷಗಳ ದೋಸ್ತಿಯ ನಡುವೆ ಬಿರುಕು ಮೂಡಿಸಿದರೆ ಅಚ್ಚರಿಪಡಬೇಕಿಲ್ಲ ಮಾರಾಯ್ರೇ. ಬಿಜೆಪಿಯ ಸಿಪಿ ಯೋಗೇಶ್ವರ್ ತಾನೇ ಅಭ್ಯರ್ಥಿ ಅಂತ ಹೇಳಿಕೊಳ್ಳುತ್ತಿದ್ದಾರೆ ಆದರೆ ಇದೇ ಕ್ಷೇತ್ರದಿಂದ ಅಸೆಂಬ್ಲಿಗೆ ಆಯ್ಕೆಯಾಗಿದ್ದ ಕುಮಾರಸ್ವಾಮಿ ಅಲ್ಲಿಂದ ತಮ್ಮ ಪಕ್ಷದ ಅಭ್ಯರ್ಥಿಯೇ ಸ್ಪರ್ಧಿಸಬೇಕೆಂದು ಹಠ ಸಾಧಿಸುತ್ತಿದ್ದಾರೆ. ಉಂಟಾಗಿರುವ ಗೊಂದಲದ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರನ್ನು ಕೇಳಿದರೆ ಸ್ಪಷ್ಟ ಉತ್ತರವಿಲ್ಲ. ಯೋಗೇಶ್ವರ್ ಪ್ರಬಲ ಆಕಾಂಕ್ಷಿಯಾಗಿರೋದು ನಿಜ, ಆದರೆ ಲೋಕಸಭಾ ಚುನಾವಣೆಯಿಂದ ಬಿಜೆಪಿ ಮತ್ತು ಜೆಡಿಎಸ್ ನಡುವೆ ಮೈತ್ರಿ ಏರ್ಪಟ್ಟಿರುವುದರಿಂದ ದೆಹಲಿ ಮಟ್ಟದಲ್ಲಿ ಎರಡು ಪಕ್ಷಗಳ ವರಿಷ್ಠರು ಕೂತು ಚರ್ಚೆ ಮಾಡಿ ಒಮ್ಮತದ ಅಭ್ಯರ್ಥಿಯನ್ನು ಆಯ್ಕೆ ಮಾಡಬೇಕಾಗುತ್ತದೆ ಎಂದು ಅವರು ಹೇಳಿದರು. ಸುಮಾರು 15 ದಿನಗಳ ಹಿಂದೆ ತಾನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರೊಂದಿಗೂ ವಿಷಯ ಚರ್ಚಿಸಿರುವುದಾಗಿ ಹೇಳಿದ ವಿಜಯೇಂದ್ರ ಅಭ್ಯರ್ಥಿಯ ಆಯ್ಕೆಗೆ ರಚಿಸಲಾಗಿದ್ದ ಸಮಿತಿ ಏನು ಶಿಫಾರಸ್ಸು ಮಾಡಿದೆ ಅನ್ನೋದು ತನ್ನ ಗಮನಕ್ಕೆ ಇನ್ನೂ ಬಂದಿಲ್ಲ ಎಂದರು.