ಮುಡಾ ಹಗರಣ ವಿಚಾರವಾಗಿ ಬಿಜೆಪಿ ನಾಯಕರು ಮೈಸೂರು ಚಲೋ.. ಪಾದಯಾತ್ರೆಯ ಪೂರ್ವಭಾವಿ ಸಭೆ ನಡೆಸುತ್ತಿದ್ದು, ಅರಮನೆ ಮೈದಾನದಲ್ಲಿ ಸಭೆ ನಡೆಸಲಾಗುತ್ತಿದೆ. ವೇದಿಕೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ವಿಪಕ್ಷ ನಾಯಕ ಆರ್. ಅಶೋಕ್, ಮಾಜಿ ಸಿಎಂ ಸದಾನಂದಗೌಡ, ಛಲವಾದಿ ನಾರಾಯಣಸ್ವಾಮಿ, ಎನ್. ರವಿಕುಮಾರ್, ಮಾಜಿ ಸಚಿವ ಸುನೀಲ್ ಕುಮಾರ್, ಬೈರತಿ ಬಸವರಾಜ್, ಪ್ರೀತಂಗೌಡ ಉಪಸ್ಥಿತರಿದ್ದರು. ಸಭೆಯಲ್ಲಿ ಹಾಲಿ ಮಾಜಿ ಶಾಸಕರು, ಜಿಲ್ಲಾಧ್ಯಕ್ಷರು, ಎಂಎಲ್ಸಿಗಳು ಹಾಗೂ ರಾಜ್ಯಾ ಪದಾಧಿಕಾರಿಗಳು ಭಾಗಿಯಾಗಿದ್ರು.