ಬೆಳ್ತಂಗಡಿಯ ಬಿಜೆಪಿ ಕಾರ್ಯಕರ್ತರನ್ನು ಮುಟ್ಟಿದ್ದೇ ಆದರೆ, ಇನ್ನು ಮುಂದೆ ಪೊಲೀಸರ ಕಾಲರ್ ಹಿಡಿಯಲು ನಾನು ಸಿದ್ಧ. ಜೈಲಿನಲ್ಲಿ ಕುಳಿತುಕೊಳ್ಳಲು ನಾನು ಸಿದ್ಧ ಎಂದು ಶಾಸಕ ಹರೀಶ್ ಪೂಂಜ ಹೇಳಿದ್ದಾರೆ.
ಕಲ್ಲಿನ ಅಕ್ರಮ ಗಣಿಗಾರಿಕೆ ಹಾಗೂ ಸ್ಫೋಟಕಗಳ ಅಕ್ರಮ ದಾಸ್ತಾನು ಪ್ರಕರಣದಲ್ಲಿ ಪಕ್ಷದ ಯುವ ಮೋರ್ಚದ ಬೆಳ್ತಂಗಡಿ ಮಂಡಲದ ಅಧ್ಯಕ್ಷ ಶಶಿರಾಜ್ ಶೆಟ್ಟಿ ಬಂಧನವನ್ನು ಖಂಡಿಸಿ ಹಾಆಗೂಊ ಪೊಲೀಸರಿಗೆ ಬೆದರಿಕೆ ಒಡ್ಡಿ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಶಾಸಕ ಹರೀಶ್ ಪೂಂಜಾ ವಿರುದ್ಧ ಎಫ್ಐಆರ್ ದಾಖಲಿಸಿದ್ದನ್ನು ವಿರೋಧಿಸಿ ಬಿಜೆಪಿ ವತಿಯಿಂಂದ ಸೋಮವಾರ ಏರ್ಪಡಿಸಿದ್ದ ಪ್ರತಿಭಟನೆಯಲ್ಲಿ ಹೇಳಿದರು.
ಜಿಲ್ಲಾ ಪೊಲೀರ್ ವರಿಷ್ಠಾಧಿಕಾರಿ ಅವರನ್ನು ನಿಂದಿಸಿದ ಅವರು, ಶಶಿರಾಜ್ ಬಂಧನ ಆದಾಗ ಸುಬ್ಬಾಪುರ ಮಠ್ಗೆ ಫೋನ್ ಮಾಡಿದತರೆ ರಿಸೀವ್ ಮಾಡಿಲ್ಲ. ತಹಶೀಲ್ದಾರ್ಗೆ ಫೋನ್ ಮಾಡಿದರೆ ಅವರ ಫೋನ್ ಸ್ವೀಚ್ ಆಫ್. ಜಿಲ್ಲೆಯಿಂದ ತಾಲೂಕಿನವರೆಗೂ ಇರುವ ನೀವೆಲ್ಲಾ ಕಾಂಗ್ರೆಸ್ ಏಜೆಂಟರಾ ಎಂದು ಅಧಿಕಾರಿಗಳ ಉದ್ದೇಶಿಸಿ ಪ್ರಶ್ನಿಸಿದರು.
ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿಯು ಒಬ್ಬ ಶಾಸಕ ಮಾಡಿದ ಕರೆಯನ್ನು ಸ್ವೀಕರಿಸುಬುದಿಲ್ಲ ಎಂದಾದರೆ ನೀವು ಕಾಂಗ್ರೆಸ್ ಏಜೆಂಟ್ ರೀತಿಯಲ್ಲಿ ಕೆಲಸ ಮಾಡುವವರು ಎಂದರ್ಥ. ಬಿಜೆಪಿ ಕಾರ್ಯಕರ್ತರನ್ನು ಬಂಧಿಸಿ ವಿನಾಕಾರಣ ಒಳಗೆ ಕುಳ್ಳಿರಿಸುವಾಗ ನಾನು ಆಕ್ರೋಶದಲ್ಲಿಯೇ ಮಾತನಾಡುತ್ತೇನೆ. ಅಧಿಕಾರಯುತವಾಗಿಯೇ ಮಾತನಾಡುತ್ತೇನೆ. ನಿರಪರಾಧಿಗೆ ಶಿಕ್ಷೆ ಆಗದ ಹಾಗೆ ನೋಡಿಕೊಳ್ಳುವುದು ನನ್ನ ಜವಾಬ್ದಾರಿ ಎಂದರು.
ಆರೋಪಿ ಶಶಿರಾಜ್ ಬಿಡುಗಡೆ ಆಗ್ರಹಿಸಿ ಬೆಳ್ತಂಗಡಿ ಠಾಣಾಧಿಕಾರಿಗೆ ಅವಾಚ್ಯವಾಗಿ ಬೈದು, ಬೆದರಿಕೆ ಒಡ್ಡಿ ಆರೋಪದ ಮೇಲೆ ಶಾಸಕ ಹರೀಶ್ ಪೂಂಜ ವಿರುದ್ಧ ಭಾನುವಾರ ಎಫ್ಐಆರ್ ದಾಖಲಾಗಿತ್ತು.