ಯುವ ಜನತೆಯನ್ನು ಹಾಳು ಮಾಡಿ, ಬಡ ಕುಟುಂಬಗಳನ್ನು ಬೀದಿಗೆ ತಳ್ಳುತ್ತಿರುವ ಆನ್ಲೈನ್ ಗೇಮ್, ಬೆಟ್ಟಿಂಗ್ ಮತ್ತಿತರ ಆ್ಯಪ್ಗಳನ್ನು ನಿರ್ಬಂಧಿಸುವಂತೆ ಕೋರಿ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದಿದ್ದಾರೆ.
ಮಕ್ಕಳು ಮತ್ತು ಯುವಜನತೆ ಆನ್ಲೈನ್ ಬೆಟ್ಟಿಂಗ್ ಆ್ಯಪ್ಗಳ ವ್ಯಸನಿಗಳಾಗಿ ಹಣ ಕಳೆದುಕೊಳ್ಳುತ್ತಿದ್ದಾರೆ. ಇದರಿಂದ ಅವರ ಮತ್ತು ಕುಟುಂಬದ ನೆಮ್ಮದಿ ಹಾಳಾಗುತ್ತಿದೆ. ಜಗಳಗಳಾಗಿ ಕುಟುಂಬಗಳು ಬೀದಿಗೆ ಬೀಳುತ್ತಿವೆ. ಅನೇಕ ದಿಟ್ಟ ನಿರ್ಧಾರ ತೆಗೆದುಕೊಂಡು ದೇಶಕ್ಕೆ, ಜನರಿಗೆ ಅನುಕೂಲ ಮಾಡಿರುವ ನೀವು, ಈ ವಿಚಾರದಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳಬೇಕು. ಮುಂದೆ ಈ ಬಗ್ಗೆ ತಮ್ಮೊಂದಿಗೆ ಚರ್ಚಿಸಲು ಬಯಸುತ್ತೇನೆ ಎಂದಿದ್ದಾರೆ.