ಚಿತ್ರದುರ್ಗದ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲಿ ಜೈಲು ಸೇರಿರುವ ನಟ ದರ್ಶ್ನ್ಗೆ ಒಂದಿಲ್ಲೊಂದು ಸಂಕಷ್ಟಗಳು ಎದುರಾಗುತ್ತಿದ್ದು, ಅವರ ಅಪ್ತರಿಗೂ ಸಂಕಷ್ಟ ಎದುರಾಗುತ್ತಿದೆ. ಈ ಹಿಂದೆ ನಟ ದರ್ಶನ್ರನ್ನು ಭೇಟಿ ಮಾಡಿದ್ದಕ್ಕೆ ಸಂಬಂಧಿಸಿದಂತೆ ಚಿಕ್ಕಣ್ಣಗೆ ನೋಟಿಸ್ ನೀಡಲಾಗಿತ್ತು.
ಈ ಸಂಬಂಧ ವಿಚಾರಣೆಗೆ ಹಾಜರಾಗಿದ್ದ ನಟ ಚಿಕ್ಕಣ್ಣ ಬಳಿ ಮಾತನಾಡಿದ್ದು, ಯಾವ ಕಾರಣಕ್ಕೆ ವಿಚಾರಣೆಗೆ ಕರೆಯಲಾಗಿತ್ತು ಎಂಬುದರ ಕುರಿತು ಮಾಹಿತಿ ನೀಡಿದ್ದಾರೆ. ವಿಚಾರಣೆ ಬಳಿಕ ಮಾತನಾಡಿದ ಚಿಕ್ಕಣ್ಣ ಪ್ರಕರಣಕೆ ಸಂಬಂಧಿಸಿದಂತೆ ನಾನು ಒಬ್ಬ ಸಾಕ್ಷಿದಾರನಾಗಿದ್ದು, ದರ್ಶನ್ರನ್ನು ಮಾತನಾಡಿಸಬಾರದೆಂದು ನನಗೆ ಗೊತ್ತಿರಲಿಲ್ಲ. ಹೀಗಾಗಿ ಅಂದು ಪರಪ್ಪನ ಅಗ್ರಹಾರದಲ್ಲಿ ಭೇಟಿ ಮಾಡಿದ್ದೆ. ಈ ಸಂಬಂಧ ಅಧಿಕಾರಿಗಳು ಆಗಸ್ಟ್ 28 ರಂದು ನೋಟಿಸ್ ನೀಡಿ ಇಂದು ಬೆಳಗ್ಗೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದರು.
ವಿಚಾರಣೆ ವೇಳೆ ಪರಪ್ಪನ ಅಗ್ರಹಾರ ಜೈಲಿಗೆ ಹೋಗಿದ್ದರ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಚಿಕ್ಕಣ್ಣ, ಅದಕ್ಕೆ ಉತ್ತರ ಕೊಟ್ಟಿದ್ದೀನಿ. ಮತ್ತೆ ಅವರು ವಿಚಾರಣೆಗೆ ಕರೆದರೆ ಬರುತ್ತೇನೆ. ಸದ್ಯ ವಿಚಾರಣೆಗೆ ಬರುವುದಕ್ಕೆ ಹೇಳಿಲ್ಲ. ಸಾಕ್ಷಿದಾರರು ಹೋಗಬಾರದು ಎಂದು ನನಗೆ ತಿಳಿದಿರಲಿಲ್ಲ. ಗೊತ್ತಿದ್ದರೆ ಹೋಗಿ ದರ್ಶನ್ರನ್ನು ಜೈಲಿನಲ್ಲಿ ಭೇಟಿ ಆಗುತ್ತಿರಲಿಲ್ಲ ಎಂದು ನಟ ಚಿಕ್ಕಣ್ಣ ಹೇಳಿದ್ದಾರೆ.