ಕನ್ನಡ ಚಿತ್ರರಂಗದ ಬಹುತೇಕ ಎಲ್ಲ ಸೆಲೆಬ್ರಿಟಿಗಳು ಒಂದೆಡೆ ಸೇರಿದ್ದರು. ಅದಕ್ಕೆ ಕಾರಣ ತರುಣ್ ಸುಧೀರ್ ಮತ್ತು ಸೋನಲ್ ಮಾಂತೆರೋ ಅವರ ಆರತಕ್ಷತೆ ಸಮಾರಂಭ. ಚಿತ್ರರಂಗ ಮಾತ್ರವಲ್ಲದೇ ವಿವಿಧ ಕ್ಷೇತ್ರಗಳ ಗಣ್ಯರು ಕೂಡ ಬಂದು ನವ ಜೋಡಿಗೆ ಅಭಿನಂದನೆ ತಿಳಿಸಿದ್ದಾರೆ.
‘ರಾಬರ್ಟ್’ ಸಿನಿಮಾದಲ್ಲಿ ಜೊತೆಯಾಗಿ ಕೆಲಸ ಮಾಡಿದ್ದ ನಿರ್ದೇಶಕ ತರುಣ್ ಸುಧೀರ್ ಹಾಗೂ ನಟಿ ಸೋನಲ್ ಮಾಂತೆರೋ ಅವರು ಈಗ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ. ಆಪ್ತರು, ಸ್ನೇಹಿತರು, ಸೆಲೆಬ್ರಿಟಿಗಳ ಸಮ್ಮುಖದಲ್ಲಿ ಅವರ ವಿವಾಹ ಕಾರ್ಯ ನಡೆಯುತ್ತಿದೆ. ನೆನ್ನೆ ಬೆಂಗಳೂರಿನ ಪೂರ್ಣಿಮಾ ಪ್ಯಾಲೇಸ್ನಲ್ಲಿ ಅದ್ದೂರಿಯಾಗಿ ರಿಸೆಪ್ಷನ್ ನಡೆದಿದ್ದು. ಬಿ.ಎಸ್. ಯಡಿಯೂರಪ್ಪ ಸೇರಿದಂತೆ ಅನೇಕ ಗಣ್ಯರು ಬಂದು ಆಶೀರ್ವಾದ ಮಾಡಿದ್ದಾರೆ. ಚಿತ್ರರಂಗದ ಹಲವು ಸೆಲೆಬ್ರಿಟಿಗಳು ಆರತಕ್ಷತೆ ಸಮಾರಂಭದಲ್ಲಿ ಭಾಗಿ ಆಗಿದ್ದಾರೆ.