ಕಾವೇರಿ ನಿವಾಸದಲ್ಲಿ ಜನರ ಸಮಸ್ಯೆ ಆಲಿಸಿ ಅರ್ಜಿ ಸ್ವೀಕರಿಸುವ ವೇಳೆ ಸಿಎಂ ಸಿದ್ದರಾಮಯ್ಯ ಕೈಗೆ ಗುಂಡು ಪಿನ್ ಚುಚ್ಚಿ ಗಾಯವಾಗಿದ್ದು, ಗಾಯವಾಗಿದ್ದ ಜಾಗಕ್ಕೆ ಕರ್ಚಿಫ್ ಸುತ್ತಿಕೊಂಡು ಸಿದ್ದರಾಮಯ್ಯ ಸಭೆಗೆ ತೆರಳಿದ್ದಾರೆ. ಈ ವೇಳೆ ಅಧಿಕಾರಿಗಳು ಏನು ಮಾಡಬೇಕು ಎಂದು ತೋಚದೆ ಕಕ್ಕಾಬಿಕ್ಕಿಯಾಗಿದ್ದಾರೆ. ಅಲ್ಲಿಯೇ ಕರ್ಚೀಫ್ ಸುತ್ತಿಕೊಂಡು ಸಿಎಂ ಸಭೆಗೆ ಹೋಗಿದ್ದಾರೆ. ವಿಧಾನಸೌಧಕ್ಕೆ ಆಗಮಿಸಿದ ವೇಳೆಯೂ ರಕ್ತ ನಿಂತಿರಲಿಲ್ಲ. ಹೀಗಾಗಿ ವೈದ್ಯರಿಗೆ ಮಾಹಿತಿ ನೀಡಿದ್ದಾರೆ.