ರೇಣುಕಾಸ್ವಾಮಿಯನ್ನು ಕೊಲೆ ಮಾಡಿದ A2 ಆರೋಪಿ ನಟ ದರ್ಶನ್ ಜಾಮೀನು ಕೋರಿ ಅರ್ಜಿ ಹಾಕಿದ್ದಾರೆ. ಸೆಷನ್ಸ್ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ. ಬಂಧನವಾಗಿ ನೂರು ದಿನ ಕಳೆದ ಬಳಿಕ ಜಾಮೀನು ಅರ್ಜಿ ಹಾಕಿದ್ದಾರೆ. ಚಿತ್ರದುರ್ಗ ಮೂಲದ ರೇಣುಕಾಸ್ವಾಮಿಯನ್ನು ದರ್ಶನ್ ಮತ್ತು ಗ್ಯಾಂಗ್ ಕೊಲೆ ಮಾಡಿದ್ದರು. ಬಳಿಕ ಬಂಧನಕ್ಕೊಳಗಾದ ನಟ ಪರಪ್ಪನ ಅಗ್ರಹಾರ ಜೈಲು ಸೇರಿದ್ದರು. ಜೈಲಲ್ಲಿ ಸಿಗರೇಟು, ವಿಡಿಯೋ ಕಾಲ್, ಟೀ ಪಾರ್ಟಿ ಮಾಡಿದ ಘಟನೆ ಬೆಳಕಿಗೆ ಬಂದಂತೆ ಅಲ್ಲಿಂದ ಬಳ್ಳಾರಿ ಜೈಲಿಗೆ ಶಿಫ್ಟ್ ಆದರು. ಆದರೀಗ ಬಿಡುಗಡೆಗಾಗಿ ಜಾಮೀನು ಕೋರಿ ನಟ ದರ್ಶನ್ ಅರ್ಜಿ ಹಾಕಿದ್ದಾರೆ.
ಜಾಮೀನು ಅರ್ಜಿ ಸಲ್ಲಿಕೆ ಬಗ್ಗೆ ದರ್ಶನ್ ವಕೀಲರಿಂದ ಮಾಹಿತಿ ಪಡೆದಿದ್ದಾರೆ. ಪೋನ್ ಕರೆ ಮೂಲಕ ಬಳ್ಳಾರಿ ಹೈ ಸೆಕ್ಯುರಿಟಿ ಸೆಲ್ನಿಂದ ದರ್ಶನ್ ಮಾಹಿತಿ ಪಡೆದಿದ್ದಾರೆ. ಪ್ರಿಸನ್ ಕಾಲ್ ಸಿಸ್ಟಂ ಅಡಿ ಪೋನ್ ಕರೆ ಮಾಡಿ ಮಾಹಿತಿ ಪಡೆದ್ದಾರೆ. ದರ್ಶನ್ ಪರ ವಕೀಲರು 57ನೇ ಸಿಸಿಹೆಚ್ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ. ಇತ್ತ ಆರೋಪಿ ಬಿಡುಗಡೆ ಭಾಗ್ಯ ಯಾವಾಗ ಸಿಗುತ್ತೋ ಎಂದು ಕಾಯುತ್ತಿದ್ದಾರೆ.
ಬಳ್ಳಾರಿಯಲ್ಲಿ ಸಂಕಷ್ಟ ಅನುಭವಿಸುತ್ತಿರುವ ದರ್ಶನ್ ಊಟ, ನಿದ್ದೆ, ಚೇರ್ ಹೀಗೆ ಹಲವು ಸೌಲಭ್ಯಗಳಿಂದ ತಲೆ ಕೆಡಿಸಿಕೊಂಡಿದ್ದಾರೆ. ಅತ್ತ ಜೈಲಾಧಿಕಾರಿಗಳು ಕಟ್ಟುನಿಟ್ಟಿನ ಕರ್ತವ್ಯ ನಿರ್ವಹಿಸುತ್ತಿದ್ದು, ಇತ್ತ ಊಟ ಸೇರದೆ ಒದ್ದಾಡುತ್ತಿರುವ ದರ್ಶನ್ ಭೇಟಿ ಮಾಡಲು ಬಂದ ಪತ್ನಿ, ತಾಯಿ, ವಕೀಲರ ಬಳಿ ಹೊರಬರುವ ಸಂಗತಿ ಬಗ್ಗೆ ಮಾತನಾಡುತ್ತಿದ್ದರು. ಇದೀಗ ಕೊನೆಗೂ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದಾರೆ.