ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ತನಿಖೆ ಬಹುತೇಕ ಪೂರ್ಣಗೊಂಡಿದ್ದು, ಬುಧವಾರ ಅಥವಾ ಗುರುವಾರ ಕೋರ್ಟ್ಗೆ ದೋಷಾರೋಪ ಪಟ್ಟಿ ಸಲ್ಲಿಕೆಯಾಗುವ ಸಾಧ್ಯತೆಯಿದೆ. ತನಿಖಾ ತಂಡವು ಪ್ರಕರಣದ ತನಿಖೆ ಸಂಬಂಧ ಈಗಾಗಲೇ ಆರೋಪಿಗಳ ಸುದೀರ್ಘ ವಿಚಾರಣೆ ನಡೆಸಿ ಹೇಳಿಕೆಗಳನ್ನು ದಾಖಲಿಸಿದೆ. ಅಂತೆಯೇ ಸಾಕ್ಷಿದಾರರ ಹೇಳಿಕೆಗಳನ್ನು ದಾಖಲಿಸಿದೆ.
ಇದರಲ್ಲಿ ಸಿಆರ್ಪಿಸಿ ಕಲಂ 164 ಅಡಿಯಲ್ಲಿ ನ್ಯಾಯಾಧೀಶರ ಎದುರೇ ಕೆಲವರ ಹೇಳಿಕೆಗಳನ್ನು ದಾಖಲಿಸಿ ಆರೋಪಿಗಳ ಕಾನೂನು ಕುಣಿಕೆ ಬಿಗಿಗೊಳಿಸಿದೆ. ಅಂತೆಯೇಘಟನಾಸ್ಥಳ, ಆರೋಪಿಗಳಮನೆಗಳು ಸೇರಿದಂತೆ ವಿವಿಧೆಡೆ ಸಂಗ್ರಹಿಸಿದ್ದ ವಸ್ತುಗಳು ಹಾಗೂ ಎಲೆಕ್ಟ್ರಾನಿಕ್ ವಿಧಿಉಪಕರಣಗಳನ್ನು ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಿತ್ತು.
ಮಡಿವಾಳದ ಎಫ್ಎಸ್ಎಲ್ ಹಾಗೂ ಹೈದರಾಬಾದ್ನ ಸಿಎಫ್ಎಸ್ಎಲ್ನಿಂದ ವರದಿಗಳು ತನಿಖಾ ತಂಡದ ಕೈ ಸೇರಿವೆ. ಹೀಗಾಗಿ ಪ್ರಕರಣದ ತನಿಖೆ ಬಹುತೇಕ ಮುಗಿದಿದ್ದು, ತನಿಖಾಧಿಕಾರಿ ನೂರಕ್ಕೂ ಅಧಿಕ ಸಾಕ್ಷ್ಯಗಳು ಒಳಗೊಂಡಂತೆ ಸುಮಾರು 4 ಸಾವಿರಕೂ ಅಧಿಕ ಪುಟಗಳ ದೋಷಾರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲು ಸಿದ್ಧತೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.