ದೆಹಲಿ: ಮೀಸಲಾತಿ ಕುರಿತಂತೆ ಅಮೆರಿಕಾದಲ್ಲಿ ಹೇಳಿಕೆ ನೀಡಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಇದು ಕಾಂಗ್ರೆಸ್ನ ಮೀಸಲಾತಿ ವಿರೋಧಿ ಮುಖವನ್ನು ಮತ್ತೊಮ್ಮೆ ಮುನ್ನೆಲೆಗೆ ತಂದಿದೆ ಎಂದು ಹೇಳಿದ್ದಾರೆ.
ಬಿಜೆಪಿ ಅಧಿಕಾರದಲ್ಲಿರುವವರೆಗೆ ಮೀಸಲಾತಿಯನ್ನು ರದ್ದುಗೊಳಿಸುವುದಾಗಲಿ ರಾಷ್ಟ್ರೀಯ ಭದ್ರತೆಯಲ್ಲಿ ರಾಜಿ ಮಾಡಿಕೊಳ್ಳುವುದಿಲ್ಲ ಎಂದಿದ್ದಾರೆ.
ಭಾರತವು ಉತ್ತಮ ಸ್ಥಿಗೆ ತಲುಪಿದಾಗ ಕಾಂಗ್ರೆಸ್, ಮೀಸಲಾತಿ ರದ್ದು ಮಾಡುವ ಕುರಿತು ಚಿಂತನೆ ನಡೆಸಲಿದೆ, ಸದ್ಯ ಅದರ ಚಿಂತನೆ ಇಲ್ಲ ಎಂದು ಅಮೆರಿಕದ ಚಾರ್ಜ್ಟೌನ್ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳ ಜೊತೆಗಿನ ಸಂವಾದದಲ್ಲಿ ರಾಹುಲ್ ಗಾಂಧಿ ಹೇಳಿದ್ದರು.
ದೇಶವನ್ನು ವಿಭಜಿಸುವ ಶಕ್ತಿಗಳ ಜೊತೆ ನಿಂತು ದೇಶ ವಿರೋಧಿ ಹೇಳಿಕೆಗಳನನು ನೀಡುವುದು ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ಗೆ ಅಭ್ಯಾಸವಾಗಿಬಿಟ್ಟಿದೆ ಎಂದು ಎಕಸ್ ಪೋಸ್ಟ್ನಲ್ಲಿ ಅಮಿತ್ ಶಾ ಕಿಡಿಕಾರಿದ್ದಾರೆ.
ಜಮ್ಮು ಮತ್ತು ಕಾಶ್ಮೀರದಲ್ಲಿ ನ್ಯಾಷನಲ್ ಕಾನ್ಫರೆನ್ಸ್ನ ರಾಷ್ಟ್ರ ವಿರೋಧಿ ಮತ್ತು ಮೀಸಲಾತಿ ವಿರೋಧಿ ಅಜೆಂಡಾವನ್ನು ಬೆಂಬಲಿಸುತ್ತಿರುವುದಿರಲಿ ಅಥವಾ ವಿದೇಶಿ ವೇದಿಕೆಗಳಲ್ಲಿ ಭಾರತ ವಿರೋಧಿ ಹೇಳಿಕೆಗಳನ್ನು ನೀಡುತ್ತಿರುವುದಿರಲಿ ರಾಹುಲ್ ಗಾಂಧಿ ಯಾವಾಗಲೂ ರಾಷ್ಟ್ರದ ಭದ್ರತೆಗೆ ಬೆದರಿಕೆ ಮತ್ತು ರಾಷ್ಟ್ರೀಯ ಭಾವನೆಗಳಿಗೆ ಧಕ್ಕೆ ಉಂಟು ಮಾಡುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.