ಇಂದು ಎಲ್ಲಡೆ ರಕ್ಷಾ ಬಂಧನ ಹಬ್ಬದ ಸಂಭ್ರಮ ಮನೆ ಮಾಡಿದೆ. ಶಾಲಾ ಮಕ್ಕಳೊಂದಿಗೆ ರಕ್ಷಾ ಬಂಧನವನ್ನು ಪ್ರಧಾನಿ ನರೇಂದ್ರ ಮೋದಿ ಆಚರಿಸಿದರು. ಪ್ರಧಾನಿ ನರೇಂದ್ರ ಮೋದಿ, ರಾಹುಲ್ ಗಾಂಧಿ, ರಾಷ್ಟ್ರಪತಿ ದ್ರೌಪದಿ ಮುರ್ಮು ಹಾಗೂ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಗಣ್ಯರು ಶುಭಾಶಯ ಕೋರಿದ್ದಾರೆ.
ಸಹೋದರ ಹಾಗೂ ಸಹೋದರಿಯರ ನಡುವೆ ಪ್ರೀಯ ಸಂಕೇತವಾಗಿರುವ ರಕ್ಷಾ ಬಂಧನ ಹಬ್ಬದಂದು ದೇಶದ ಜನತೆಗೆ ಶುಭಾಶಯಗಳು. ಈ ಹಬ್ಬ ನಿಮ್ಮ ಸಂಬಂಧಗಳಲ್ಲಿ ಹೊಸ ಮಾಧುರ್ಯವನ್ನು ತರಲಿ. ನಿಮ್ಮ ಜೀವನದಲ್ಲಿ ಸಂತೋಷ, ಸಮೃದ್ಧಿ ತುಂಬಿರಲಿ ಎಂದು ಪ್ರಧಾನಿ ನರೇಂದ್ರ ಮೋದಿ ಸಾಮಾಜಿಕ ಜಾಲತಾಣದಲ್ಲಿ ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದಾರೆ.