ಇತ್ತೀಚಿನ ಲೋಕಸಭಾ ಚುನಾವಣೆಯಲ್ಲಿ ಮಹಾರಾಷ್ಟ್ರದಲ್ಲಿ ಬಿಜೆಪಿಯ ಕಳಪೆ ಸಾಧನೆಗೆ ಡಿಸಿಎಂ ಅಜಿತ್ ಪವಾರ್ ನೇತೃತ್ವದ ಎನ್ಸಿಪಿ ಜೊತೆ ಮೈತ್ರಿ ಮಾಡಿಕೊಂಡಿದ್ದೇ ಕಾರಣ ಎಂದು ಆರ್ಎಸ್ಎಸ್ ನಂಟಿನ ಮರಾಠಿ ವಾರಪತ್ರಿಕೆ ‘ವಿವೇಕ’ ಆಕ್ಷೇಪಿಸಿದೆ. ಮೈತ್ರಿಗೆ ಸ್ಥಳೀಯ ಕಾರ್ಯಕರ್ತರು, ನಾಯಕರ ವಿರೋಧವಿದ್ದರೂ ಬಿಜೆಪಿ ಮೈತ್ರಿ ಮಾಡಿಕೊಂಡಿತು. ಇದು ಮತದಾರರ ಭಾವನೆಗಳಿಗೆ ವಿರುದ್ಧವಾಗಿತ್ತು. ಹೀಗಾಗಿ ಕಳೆದ ಬಾರಿ 23 ಸ್ಥಾನ ಗೆದ್ದಿದ್ದ ಪಕ್ಷ ಈ ಬಾರಿ 8ಕ್ಕೆ ಇಳಿಯಿತು. ಇನ್ನೊಂದೆಡೆ ಮಧ್ಯಪ್ರದೇಶದಲ್ಲಿ ಕಾರ್ಯಕರ್ತರು, ಸ್ಥಳೀಯರ ನಾಯಕರಿಗೆ ಮಾತಿಗೆ ಬೆಲೆ ಕೊಟ್ಟಿದ್ದಕ್ಕೆ ಮಧ್ಯಪ್ರದೇಶದಲ್ಲಿ ಬಿಜೆಪಿ ಕ್ಲೀನ್ಸ್ವೀಪ್ ಮಾಡಿತು ಎಂದು ಪತ್ರಿಕೆ ಹೇಳಿದೆ.