ಹರಿಯಾಣದಲ್ಲಿ ಆಡಳಿತವಿರೋಧಿ ಅಲೆ ಎದುರಿಸುತ್ತಿರುವ ಬಿಜೆಪಿ ಸತತ 3ನೇ ಬಾರಿ ಶತಾಯ ಗತಾಯ ಅಧಿಕಾರಕ್ಕೆ ಏರಲು ಕಾಂಗ್ರೆಸ್ ರೀತಿಯಲ್ಲೇ ಉಚಿತ ಗ್ಯಾರಂಟಿ ಯೋಜನೆಗಳನ್ನು ತನ್ನ ಪ್ರಣಾಳಿಕೆಯಲ್ಲಿ ಘೋಷಿಸಿದೆ. ಕರ್ನಾಟಕದ ʻಗೃಹಲಕ್ಷ್ಮಿʼ ಮಾದರಿಯಲ್ಲಿ ಮಹಿಳೆಯರಿಗೆ ತಿಂಗಳಿಗೆ 2,100 ರುಪಾಯಿ ಮಾಸಾಶನ, ಬಡವರಿಗೆ 500 ರುಪಾಯಿ ಸಬ್ಸಿಡಿದರದಲ್ಲಿ ಸಿಲಿಂಡರ್, ಕಾಲೇಜು ಹುಡುಗಿಯರಿಗೆ ಉಚಿತ ಸ್ಕೂಟಿ, ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತ ಡಯಾಲಿಸಿಸ್ ಮುಂತಾದವು ಆ ಭರವಸೆಗಳಲ್ಲಿ ಸೇರಿವೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ʻಸಂಕಲ್ಪ ಪತ್ರʼ ಹೆಸರಿನ ಪ್ರಣಾಳಿಕೆಯನ್ನು ಗುರುವಾರ ರೋಹಕ್ನಲ್ಲಿ ಬಿಡುಗಡೆ ಮಾಡಿದರು.
ಏನೇನು ಭರವಸೆ?
- ʻಚಿರಾಯು ಆಯುಷ್ಮಾನ್ʼ ಯೋಜನೆಯಡಿ ಪ್ರತಿ ಕುಟುಂಬಕ್ಕೆ 10 ಲಕ್ಷವರೆಗೆ ಉಚಿತ ಚಿಕಿತ್ಸೆ
- ಹರಿಯಾಣದ 70 ವರ್ಷ ಮೇಲ್ಪಟ್ಟ ಪ್ರತಿ ಹಿರಿಯ ನಾಗರಿಕರಿಗೆ 5 ಲಕ್ಷರು.ವರೆಗೆ ಉಚಿತ ಚಿಕಿತ್ಸೆ
- ʻಹರ್ ಘರ್ ಗೃಹಿಣಿ’ ಯೋಜನೆಯಡಿ ಬಿಪಿಎಲ್ ಕುಟುಂಬರೆ 500ಗೆ ಅಡುಗೆ ಸಿಲಿಂಡರ್
- ʻಲಾಡೋಲಕ್ಷ್ಮಿʼ ಯೋಜನೆಯಡಿ ರಾಜ್ಯದ ಎಲ್ಲ ಮಹಿಳೆಯರಿಗೆ ತಲಾ 2100 ರು. ಮಾಸಾಶನ ನೀಡುವುದಾಗಿ ಭರವಸೆ
- ಗ್ರಾಮೀಣ ಭಾಗದ ಕಾಲೇಜು ವಿದ್ಯಾರ್ಥಿನಿಯರಿಗೆ ಉಚಿತವಾಗಿ ಸ್ಕೂಟರ್ ವಿತರಣೆ