ದೀಪಾವಳಿ ಒಳಗೆ ಸಿದ್ದರಾಮಯ್ಯ ಸರ್ಕಾರ ಪತನವಾಗಲಿದೆ. ಸರ್ಕಾರ ಪತನಕ್ಕೆ ಟೈಮ್ ಬಾಂಬ್ ಫಿಕ್ಸ್ ಆಗಿದೆ. ಸಂಕ್ರಾಂತಿ ದೂರ ಆಯ್ತು, ದೀಪಾವಳಿ ಒಳಗೆ ಕಾಂಗ್ರೆಸ್, ಸಿದ್ದರಾಮಯ್ಯ ಸರ್ಕಾರ ಢಮಾರ್ ಎಂದು ಹುಬ್ಬಳ್ಳಿಯಲ್ಲಿ ಮಾಜಿ ಸಚಿವ ಹಾಗೂ ವಿಧಾನ ಪರಿಷತ್ ಸದಸ್ಯ ಸಿಟಿ ರವಿ ಹೊಸ ಬಾಂಬ್ ಸಿಡಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು ಹೊಸ ಮುಖ್ಯಮಂತ್ರಿ ಹೊಸ ಸರ್ಕಾರನಾ ಅಂದ್ರೆ ಕಾಲ ನಿರ್ಣಯ ಮಾಡುತ್ತದೆ. ಸಿದ್ದರಾಮಯ್ಯ ರಾಜೀನಾಮೆಗೆ ಕಾಂಗ್ರೆಸ್ ಮುಹೂರ್ತ ನಿಗದಿ ಮಾಡಿದೆ. ಹೊರಗಡೆ ಸಿದ್ದರಾಮಯ್ಯ ಅವರ ಹಿಂದೆ ಬಂಡೆಯಂತೆ ನಿಂತಿದ್ದಿವಿ ಅಂತಾರೆ. ಸಿದ್ದರಾಮಯ್ಯ ಹೋಗೋದು ಫಿಕ್ಸ್ ಆಗಿದ್ದು, ಹೀಗಾಗಿ ಕಾಂಪಿಟೇಶನ್ ಶುರುವಾಗಿದೆ. ಒಂದು ಡಜನ್ಗೆ ಹೆಚ್ಚು ಜನ ಆಕಾಂಕ್ಷಿಗಳಾಗಿದ್ದಾರೆ. ಸಿಎಂ, ಸಂಗೊಳ್ಳಿ ರಾಯಣ್ಣ ಪಿತೂರಿಗೆ ಬಲಿಯಾಗಿದ್ದಾರೆ ಎಂದಿದ್ದರು. ನೀವು ಸಂಗೊಳ್ಳಿ ರಾಯಣ್ಣ ಅಂತಾ ನಾನು ಭಾವಿಸಲ್ಲ ಎಂದು ಸಿ.ಟಿ ರವಿ ಹೇಳಿದರು.
ಕಾಂಗ್ರೆಸ್ ಸರ್ಕಾರದಲ್ಲಿ ಹಗರಣ ನಡೆದಿರೋದು ಸ್ಪಷ್ಟ. ಸರ್ಕಾರದಲ್ಲಿ ಬರೀ ಹಗರಣಗಳೆ ಸುದ್ದಿ. ಇದು ಭ್ರಷ್ಟಾಚಾರದ ಸರ್ಕಾರ. ಉಪ್ಪು ತಿಂದವನು ನೀರು ಕುಡಿಯಲೇಬೇಕು. ಕಳ್ಳನ ಹೆಂಡತಿ ಡ್ಯಾಶ್ ಡ್ಯಾಶ್ ಎಂದು ಸಿ.ಟಿ ರವಿ ಗುಡುಗಿದರು.
ಕಾಂಗ್ರೆಸ್ ಪಕ್ಷದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೋಗುವುದನ್ನೇ ಕಾಯ್ತಾ ಇದ್ದಾರೆ. ವಿರೋಧ ಪಕ್ಷದವರಗಿಂತ ಅವರದೇ ಕುತೂಹಲ ಜಾಸ್ತಿ ಆಗಿದ್ದು, ನಾವು ವಿರೋಧ ಪಕ್ಷದವರು ಭ್ರಷ್ಟಾಷಾರ ವಿರುದ್ಧ ಹೋರಾಟ ಮಾಡುತ್ತಾ ಇದ್ದೇವೆ. ಭ್ರಷ್ಟಾಚಾರಿಗಳು ಮನೆಗೆ ಹೋಗಬೇಕು ಅಂತಾ ಹೋರಾಟ ಮಾಡುತ್ತಿದ್ದೇವೆ. ಒಳೊಳಗೆ ಯಾವಾಗ ಮನೆಗೆ ಹೋಗುತ್ತಾರೆ ಅಂತಾ ಸ್ಕೇಚ್ ಹಾಕುತ್ತಿದ್ದಾರೆ. ಸಚಿವರಾದ ಸತೀಶ ಜಾರಕಿಹೋಳಿ, ಆರ್ ವಿ ದೇಶಪಾಂಡೆ, ಎಂ.ಬಿ ಪಾಟೀಲ್, ಡಿ.ಕೆ ಶಿವಕುಮಾರ್, ಪರಮೇಶ್ವರ ಉದ್ದ ಹಣಮಂತನ ಬಾಲದಂತೆ ಬೆಳೆಯುತ್ತಿದೆ. ಈಗಾಗಲೇ ಕಾಂಗ್ರೆಸ್ ಒಳಗೆ ನಾನು ನಾನು ಅಂತಾ ಶುರುವಾಗಿದ್ದು, ಇನ್ನೊಂದು ಎರಡು ವಾರ ಕಳೆದರೆ ಇನ್ನೂ ಇಪ್ಪತ್ತು ಜನರು ಹುಟ್ಟಿಕೊಳ್ಳುತ್ತಾರೆ. ನಾನು ನಾನು ಸಿಎಂ ಎನ್ನುತ್ತಿದ್ದಾರೆ. ನಾನೇ ಮುಂದೆ ಅಂತಾ ಈಗಾಗಲೇ ಒಂದು ಡಜನ್ ಜನ ಹುಟ್ಟಿಕೊಂಡಿದ್ದಾರೆ ಎಂದರು.