ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ನಾಗೇಂದ್ರನನ್ನು ಕೋರ್ಟ್ ಮತ್ತೆ ಇಡಿ ಕಸ್ಟಡಿಗೆ ನೀಡಿದೆ. ನಾಗೇಂದ್ರ ಇಡಿ ಕಸ್ಟಡಿ ಅವಧಿ ಇಂದಿಗೆ ಮುಗಿದಿದ್ದರಿಂದ ಅವರನ್ನು ಇಂದು ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್ಗೆ ಹಾಜರುಪಡಿಸಲಾಯಿತು. ವಿಚಾರಣೆ ನಡೆಸಿದ ಕೋರ್ಟ್ ಮತ್ತೆ ನಾಗೇಂದ್ರರನ್ನು 5 ದಿನಗಳ ಕಾಲ ಇಡಿ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದೆ. ವಾಲ್ಮೀಕಿ ನಿಗಮ ಹಗರಣದಲ್ಲಿ ವರ್ಗಾವಣೆಯಾಗಿದ್ದ ಹಣದಲ್ಲಿ ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಮದ್ಯ ಖರೀದಿ ಮಾಡಿದ್ದಾರೆ. ಈ ಬಗ್ಗೆ ಬಸನಗೌಡ ದದ್ದಲ್ ಮತ್ತು ನಾಗೇಂದ್ರ ನಿವಾಸದಲ್ಲಿ ಮಹತ್ವದ ದಾಖಲೆಗಳ ಪತ್ತೆಯಾಗಿವೆ ಎಂದು ಇಡಿ ಪ್ರಕಟಣೆ ಮೂಲಕ ತಿಳಿಸಿದೆ. ಈ ಎಲ್ಲಾ ಅಂಶಗಳನ್ನು ಕೋರ್ಟ್ ಗಮನಕ್ಕೆ ತಂದು ಮತ್ತೆ ತನ್ನ ಕಸ್ಟಡಿಗೆ ಪಡೆದುಕೊಳ್ಳುವಲ್ಲಿಇಡಿ ಯಶಸ್ವಿಯಾಗಿದೆ.