ಕೇರಳ ವಯನಾಡು ಭೂಕುಸಿತವು ದೇಶಾದ್ಯಂತ ಬೆಚ್ಚಿಬೀಳಿಸಿದೆ. ಇಂದು ಪ್ರಧಾನಿ ನರೇಂದ್ರ ಮೋದಿ ಅವರು ವಯನಾಡಿನಲ್ಲಿ ಬೂಕುಸಿತದ ತೀವ್ರತೆ ಕುರಿತು ಮೈಮಾನಿಕ ಸಮೀಕ್ಷೆ ನಡೆಸಿದರು. ನಿರಾಶ್ರೀತರ ಕೇಂದ್ರಗಳಿಗೆ ಭೇಟಿ ನೀಡಿದ ಅವರು ಸಂತ್ರಸ್ತರಿಗೆ ಸಾಂತ್ವನ ಹೇಳಿದರು. ನಿರಾಶ್ರಿತರ ಕೇಂದ್ರದಲ್ಲಿರುವ ಮಹಿಳೆಯರು, ಮಕ್ಕಳು ಎಲ್ಲರೊಂದಿಗೆ ಮಾತನಾಡಿದ ಅವರು ಸಾಂತ್ವನ ಹೇಳಿದರು.
ಇದಕ್ಕೂ ಮುನ್ನ ತಿರುವನಂತಪುರಂ ವಿಮಾನ ನಿಲ್ದಾಣಕ್ಕೆ ಆಗಮಿಸಿದ ನರೇಂದ್ರ ಮೋದಿ ಅವರನ್ನು ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಮತ್ತು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದರು. ಬಳಿಕ ಮೋದಿ ಹೆಲಿಕಾಪ್ಟರ್ ಮೂಲಕ ವಯನಾಡಿಗೆ ಪ್ರಯಾಣ ಬೆಳೆಸಿದರು. ಮೋದಿ ಅವರೊಂದಿಗೆ ಆರಿಫ್ ಮೊಹಮ್ಮದ್ ಖಾನ್, ಪಿಣರಾಯಿ ವಿಜಯನ್ ಮತು ಕೇಂದ್ರ ಸಚಿವ ಸುರೇಶ್ ಗೋಪಿ ಕೂಡ ತೆರಳಿದರು. ಭೂಕುಸಿತದಿಂದ ನೂರಾರು ಜನರು ಸಾವನ್ನಪ್ಪಿದ ವಯನಾಡಿನಲ್ಲಿ ವೈಮಾನಿಕ ಸಮೀಕ್ಷೆಯನ್ನು ನಡೆಸಿದ ಪ್ರಧಾನಿ ನರೇಂದ್ರ ಮೋದಿ ದುರಂತದ ಬಗ್ಗೆ ಮಾಹಿತಿ ಪಡೆದುಕೊಂಡರು.