ಯಾವ ಸರ್ಕಾರ ಬೀಳುತ್ತಂತೆ? ಮುಡಾ ಹಗರಣ ವಿಚಾರದಲ್ಲಿ ಸಿಎಂ ಪಾತ್ರ ಏನಿದೆ? ತಪ್ಪೇನಿದೆ? ಆಲ್ಟರ್ನೇಟ್ ಸೈಟ್ ಕೊಟ್ಟಿರೋದು ಬಿಜೆಪಿ ಸರ್ಕಾರದ ಅವಧಿಯಲ್ಲಿ. ಈಗಲೂ ಸಿದ್ದರಾಮಯ್ಯಗೆ ಕಪ್ಪು ಚುಕ್ಕಿ ಇಲ್ಲ. ಏನಿದೆ ಕಪ್ಪು ಚುಕ್ಕೆ? ಎಂದು ಬಿಜೆಪಿ ನಾಯಕರ ಆರೋಪಗಳಿಗೆ ಸಚಿವ ಜಮೀರ್ ಅಹ್ಮದ್ ಖಾನ್ ತಿರುಗೇಟು ನೀಡಿದರು.
ಇಂದು ಮಾತನಾಡಿದ ಸಚಿವರು, ಸಿದ್ದರಾಮಯ್ಯ ಯಾಕೆ ರಾಜೀನಾಮೆ ಕೊಡಬೇಕು ಎಂದು ಹೇಳಲಿ? ಯಾವುದೋ ದೇವರಾಜ್ ಕಡೆಯಿಂದ ಬಾಮೈದ ಕೊಂಡುಕೊಂಡಿದ್ದಾರೆ. ಬಾಮೈದ ಅವರ ಅಕ್ಕನಿಗೆ ಗಿಫ್ಟ್ ಮಾಡಿದ್ದಾರೆ. ಅವರದೇ ಸೈಟಿನಲ್ಲಿ ಮುಡಾ ಲೇಔಟ್ ಮಾಡಿದೆ. ಸಿದ್ದರಾಮಯ್ಯನವರು ಸೈಟ್ ಹಂಚಿಕೆ ಮಾಡಿದ್ದಾರಾ? ಮುಖ್ಯಮಂತ್ರಿ ಇರುವಾಗ ಕೊಟ್ರ? ಬಿಜೆಪಿ ಸರ್ಕಾರ ಇರುವಾಗ ಕೊಟ್ಟಿದ್ದೇ ಹೊರತು ಸಿಎಂ ಸಿದ್ದರಾಮಯ್ಯ ಆಗಿದ್ದಾಗ ಕೊಟ್ಟಿದ್ದಲ್ಲ. ಬಿಜೆಪಿಯವರಿಗೆ ಇಶ್ಯು ಏನಿಲ್ಲ ಅದಕ್ಕೆ ಇದನ್ನೇ ಇಶ್ಯು ಮಾಡಿದ್ದಾರೆ. ಕುಮಾರಸ್ವಾಮಿಯವರು ಅವರ ಬೆನ್ನಹಿಂದೆ ನಿಂತಿದ್ದಾರೆ. ಕುಮಾರಸ್ವಾಮಿಯವರಿಗೆ ಸಿದ್ದರಾಮಯ್ಯ ಸಿಎಂ ಆಗಿರುವುದು ಸಹಿಸುವುದಕ್ಕೆ ಆಗುತ್ತಿಲ್ಲ ಹೀಗಾಗಿ ಸಿಎಂ ಟಾರ್ಗೆಟ್ ಆಗಿದ್ದಾರೆ. ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದರೆ ತಾವು ಯಾವತ್ತೂ ಸಿಎಂ ಆಗುವ ಅವಕಾಶ ಸಿಗಲ್ಲ ಅಂತ ಬಿಜೆಪಿಗೂ ಕುಮಾರಸ್ವಾಮಿಗೂ ಗೊತ್ತು. ಹೀಗಾಗಿ ಏನೋ ಅವಕಾಶ ಸಿಕ್ಕಿದೆ, ಕೆಣಕಬೇಕು ಅಂತಾ ಕೆಣಕುತ್ತಿದ್ದಾರೆ. ಸಿದ್ದರಾಮಯ್ಯ ಸಿಎಂ ಆಗಿರೋವರೆಗೂ ಅವರಿಗೆ ಮುಂದೆ ಬರೋಕೆ ಅವಕಾಶ ಇರೊಲ್ಲ ಅಂತಾ ಹೀಗೆ ಮಾಡ್ತಿದ್ದಾರೆ ಎಂದು ತಿರುಗೇಟು ನೀಡಿದರು.