ಪಾದಯಾತ್ರೆ ಯಶಸ್ವಿಗಾಗಿ ಚಾಮುಂಡೇಶ್ವರಿತಾಯಿ ಬಳಿ ಪ್ರಾರ್ಥಿಸಿದ್ದೇನೆ. ಪಾದಯಾತ್ರೆಗೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಚಾಲನೆ ನೀಡಲಿದ್ದಾರೆ. ಕಾಂಗ್ರೆಸ್ ಸರ್ಕಾರ ಅಹಿಂದ ಅಂತ ಹೆಸರು ಹೇಳಿಕೊಂಡು ಅಧಿಕಾರ ಹಿಡಿದಿದೆ. ಆದರೆ ಅಹಿಂದ ವರ್ಗಕ್ಕೆ ಸಿದ್ದರಾಮಯ್ಯ ಸರ್ಕಾರ ದ್ರೋಹ ಬಗೆದಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ ಮಿತಿಮೀರಿ ಹೋಗಿದೆ. ತುಳಿತಕ್ಕೊಳಗಾದವರಿಗೆ ನ್ಯಾಯ ಸಿಗಬೇಕು, ತಪ್ಪಿತಸ್ಥರಿಗೆ ಶಿಕ್ಷೆ ಆಗಲಿ. ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ, ಮುಡಾ ಸೈಟ್ ಹಗರಣ SCP, TSP ಹಣ ದುರ್ಬಳಕೆ ಖಂಡಿಸಿ ಮೈಸೂರು ಪಾದಯಾತ್ರೆ ಮಾಡುತ್ತಿದ್ದೇವೆ ಎಂದು ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿದರು.