ದೇಶಾದ್ಯಂತ ಗೌರಿ-ಗಣೇಶ ಹಬ್ಬವನ್ನು ಸಡಗರದಿಂದ ಆಚರಣೆ ಮಾಡಲಾಗುತ್ತಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ದೇಶದ ಜನತೆಗೆ ಶುಭಾಶಯಗಳನ್ನು ಕೋರಿದ್ದಾರೆ.
ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ದೇಶದ ಜನತೆಗೆ ಗಣೇಶ ಚತುರ್ಥಿಯ ಶುಭಾಶಯಗಳು. ಗಣಪತಿ ಬಪ್ಪ ಮೋರ್ಯ ಎಂದು ಪೋಸ್ಟ್ ಮಾಡಿ ಶುಭಾಶಯ ಕೋರಿದ್ದಾರೆ. ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಪೋಸ್ಟ್ ಮಾಡಿ, ನಾಡಿನ ಸಮಸ್ತ ಜನತೆಗೆ ಗಣೇಶ ಚತುರ್ಥಿಯ ಹಾರ್ದಿಕ ಶುಭಾಶಯಗಳು. ಗಣೇಶನೆಂದರೆ ವಿಘ್ನ ನಿವಾರಕ, ಸಂಕಟ ಹರಣ. ಈ ಗಣೇಶ ಚತುರ್ಥಿಯು ನಿಮ್ಮ ಬದುಕಿನಲ್ಲಿ ಯಶಸ್ಸು ಮತ್ತು ಶುಭವನ್ನು ತರಲಿ ಹಾಗೂ ಗಣಪನ ಕೃಪೆ ಎಲ್ಲರ ಮೇಲಿರಲಿ ಎಂದು ಹಾರೈಸುತ್ತೇನೆಂದು ಹೇಳಿದ್ದಾರೆ.
ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಪೋಸ್ಟ್ ಮಾಡಿ, ನಾಡಿನ ಸಮಸ್ತ ಜನತೆಗೆ ಗಣೇಶ ಚತುರ್ಥಿಯ ಹಾರ್ದಿಕ ಶುಭಾಶಯಗಳು. ಗಣೇಶನೆಂದರೆ ವಿಘ್ನ ನಿವಾರಕ, ಸಂಕಟ ಹರಣ. ಈ ಗಣೇಶ ಚತುರ್ಥಿಯು ನಿಮ್ಮ ಬದುಕಿನಲ್ಲಿ ಯಶಸ್ಸು ಮತ್ತು ಶುಭವನ್ನು ತರಲಿ ಹಾಗೂ ಗಣಪನ ಕೃಪೆ ಎಲ್ಲರ ಮೇಲಿರಲಿ ಎಂದು ಹಾರೈಸುತ್ತೇನೆಂದು ಹೇಳಿದ್ದಾರೆ.