ಕೇರಳದ ಮಲಪ್ಪುರಂ ಜಿಲ್ಲೆಯ ನೀಲಂಬೂರು ತಾಲೂಕಿನ ವಾಂಡೂರ್ನವನಾದ 23 ವರ್ಷದ ವಿದ್ಯಾರ್ಥಿ ಜಾಂಡೀಸ್ ರೀತಿಯ ಲಕ್ಷಣಗಳು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ ತವರಿಗೆ ಮರಳಿದ್ದ. ಲಕ್ಷಣ ಕಾಣಿಸುವ ಮೊದಲೇ ಬೆಂಗಳೂರಿಂದ ಆತ ತೆರಳಿದ್ದ. ಬೆಂಗಳೂರಿನ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ 23 ವರ್ಷದ ವಿದ್ಯಾರ್ಥಿ ಕೇರಳದಲ್ಲಿ ನಿಫಾ ವೈರಸ್ನಿಂದ ಮೃತಪಟ್ಟಿದ್ದು, ಇದಕ್ಕೂ ನಮ್ಮ ರಾಜ್ಯಕ್ಕೂ ಯಾವುದೇ ಸಂಬಂಧವಿಲ್ಲ. ಹೀಗಾಗಿ ರಾಜ್ಯದಲ್ಲಿ ಯಾರೂ ಆತಂಕಪಡುವ ಅಗತ್ಯವಿಲ್ಲ ಎಂದು ಆರೋಗ್ಯ ಇಲಾಖೆ ಆಯುಕ್ತ ಕೆ.ಬಿ. ಶಿವಕುಮಾರ್ ಹೇಳಿದ್ದಾರೆ.
ವಿದ್ಯಾರ್ಥಿಯು ಲಕ್ಷಣ ಕಾಣಿಸುವ 20 ದಿನಗಳ ಮೊದಲೇ ಕೇರಳಕ್ಕೆ ಹೋಗಿದ್ದರು. ಸದ್ಯಕ್ಕೆ ರಾಜ್ಯದಲ್ಲಿ ಯಾವುದೇ ನಿಫಾ ಪ್ರಕರಣ ಪತ್ತೆಯಾಗಿಲ್ಲ. ಹೀಗಾಗಿ ಆತಂಕಪಡುವ ಅಗತ್ಯವಿಲ್ಲ. ಅಧಿಕಾರಿಗಳು ಸಹಜವಾಗಿ ಎಲ್ಲ ಮುನ್ನೆಚ್ಚರಿಕಾ ಕ್ರಮ ತೆಗೆದುಕೊಳ್ಳುತ್ತಿರುತ್ತಾರೆ. ಪ್ರಕರಣದಿಂದ ವಿಶೇಷ ಸೋಂಕು ಮುನ್ನೆಚ್ಚರಿಕೆ ತೆಗೆದುಕೊಳ್ಳುವ ಅಗತ್ಯವಿಲ್ಲ. ಏಕೆಂದರೆ ಈ ಪ್ರಕರಣಕ್ಕೂ ರಾಜ್ಯಕ್ಕೂ ಸಂಬಂಧವಿಲ್ಲ ಎಂದು ಹೇಳಿದರು. ಇತ್ತೀಚೆಗೆ ಮಲಪ್ಪುರಂನ ಖಾಸಗಿ ಆಸ್ಪತ್ರೆಯಲ್ಲಿ 23 ವರ್ಷದ ಯುವಕ ನಿಪಾ ವೈರಸ್ನಿಂದ ಮೃತಪಟ್ಟಿದ್ದಾರೆ.
ಬೆಂಗಳೂರಿನಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ ಬೆಂಗಳೂರಿನಿಂದ ತವರು ಕೇರಳಕ್ಕೆ ಹೋಗಿದ್ದರು. ಕೆಲ ದಿನಗಳ ಬಳಿಕ ಜಾಂಡೀಸ್ನಂತಹ ಲಕ್ಷಣಗಳು ಕಾಣಿಸಿಕೊಂಡು 3-4 ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದಿದ್ದರು. ಅಂತಿಮವಾಗಿ ಸತತ ಏಳು ದಿನಗಳ ಕಾಲ ಆಸ್ಪತ್ರೆಯಲ್ಲಿದ್ದ ಬಳಿಕ ಸೆ.9ರಂದು ಮೃತಪಟ್ಟಿದ್ದರು. ಬಳಿಕ ವೈರಾಣು ಪರೀಕ್ಷೆ ವೇಳೆ ನಿಫಾ ವೈರಸ್ನಿಂದ ಮೃತಪಟ್ಟಿರುವುದು ಖಚಿತಪಟ್ಟಿದೆ.