ಬೆಂಗಳೂರಿನಲ್ಲಿ ಸದ್ಯ ನಮ್ಮ ಮೆಟ್ರೋ ಬಿಎಂಆರ್ಸಿಎಲ್ ಕಾಮಗಾರಿಗಳು ವೇಗದ ಗತಿಯಲ್ಲಿ ಸಾಗುತ್ತಿದೆ. ಇದರಿಂದ ನಗರದ ಕೆಲವು ರಸ್ತೆಗಳಲ್ಲಿ ವಾಹನ ಸಂಚಾರ ನಿರ್ಬಂಧಿಸಲಾಗಿದೆ. ಇದೀಗ ಬೆಂಗಳೂರಿನ ಈ ರಸ್ತೆಯಲ್ಲಿ ಒಂದು ವಾರ ವಾಹನ ಸಂಚಾರ ನಿರ್ಬಂಧಿಸಲಾಗಿದೆ. ಹೊರ ವರ್ತುಲ ರಸ್ತೆಯ ಐಬಿಐಎಸ್ ಹೋಟೆಲ್ನಿಂದ ದೇವರಬೀಸನಹಳ್ಳಿ ಜಂಕ್ಷನ್ವರೆಗಿನ ಸರ್ವಿಸ್ ರಸ್ತೆಯಲ್ಲಿ ಒಂದು ವಾರ ವಾಹನ ಸಂಚಾರ ನಿರ್ಬಂಧಿಸಲಾಗಿದೆ.
ಸರ್ವಿಸ್ ರಸ್ತೆಯಲ್ಲಿ ಬಿಎಂಆರ್ಸಿಎಲ್ ಮತ್ತು ಬೆಸ್ಕಾಂ ವತಿಯಿಂದ ಕೇಬಲ್ ಅಳವಡಿಸುವ ಕಾಮಗಾರಿ ನಡೆಯುತ್ತಿದೆ. ಹೀಗಾಗಿ ಆಗಸ್ಟ್ 13ರವರೆಗೆ ಈ ರಸ್ತೆಯಲ್ಲಿ ರಾತ್ರಿ 11 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೆ ವಾಹನ ಸಂಚಾರ ನಿಷೇಧಿಸಿ ಎಂದು ಬೆಂಗಳೂರು ಸಂಚಾರ ಪೊಲೀಸ್ ಮಾಧ್ಯಮ ಪ್ರಕಟಣೆ ಹೊರಡಸಿದೆ. ಬದಲಿ ಮಾರ್ಗ ಸೂಚಿಸಲಾಗಿದೆ. ಕಾಮಗಾರಿ ಸಮಯದಲ್ಲಿ ಸುಗಮ ಸಂಚಾರಕ್ಕಾಗಿ ದೇವರಬಿಸನಹಳ್ಳಿ ಮೇಲು ಸೇತುವೆ ಮೂಲಕ ಸಂಚರಿಸಬಹುದಾಗಿದೆ.