ನೀನಲ್ಲ, ನಿಮ್ಮಪ್ಪನ ಕೈಲೂ ನನ್ನ ಟಚ್ ಮಾಡಕ್ಕಾಗಲ್ಲ ಎಂದು ಸಂಸದ ಸುಧಾಕರ್ ಗೆ ಶಾಸಕ ಪ್ರದೀಪ್ ಈಶ್ವರ್’ಗೆ ಸವಾಲು ಹಾಕಿದ್ದಾರೆ. ನಗರಸಭೆ ಚುನಾವೆಣೆ ಬಳಿಕ ಮಾತನಾಡಿದ ಅವರು, ಸುಧಾಕರ್ ಒಬ್ಬ ಕೋವಿಡ್ ಕಳ್ಳ. ಸುಧಾಕರ್ನನ್ನು ಜೈಲಿಗೆ ಹಾಕುವವರೆಗೂ ಬಿಡಲ್ಲ. ತಾಕತ್ತು, ದಮ್ಮು ಇದ್ದರೆ ಬಚಾವ್ ಆಗು ನೋಡೋಣ ಎಂದು ಏಕವಚನದಲ್ಲೇ ಸವಾಲು ಹಾಕಿದರು.
ನಗರಸಭೆ ಅಧ್ಯಕ್ಷ ಉಪಾಧ್ಯಕ್ಷರ ಚುನಾವಣೆಯಲ್ಲಿ 7-8 ಕೋಟಿ ರೂಪಾಯಿ ಖರ್ಚು ಮಾಡಿದ್ದಾರೆ. ಸಂಸದರು ಖರ್ಚು ಮಾಡಿ ಕಾಂಗ್ರೆಸ್ ಸದಸ್ಯರನ್ನು ಖರೀದಿ ಮಾಡಿದ್ದಾರೆ. ನನ್ನ ಒಂದು ಕೂದಲನ್ನು ಕಿತ್ತುಕೊಳ್ಳಲು ಸಾಧ್ಯವಿಲ್ಲ. ಹೆಣಗಳ ಮೇಲೆ ದುಡ್ಡು ಮಾಡಿ ನಗರಸಭೆ ಚುನಾವಣೆಯಲ್ಲಿ ಹಾಕಿದ್ದಾರೆ. ನಮ್ಮ ಬಳಿ ಹಣ ಇಲ್ಲ. ನಿನ್ನ ಅಖಾಡದಲ್ಲಿ ಬಂದು ನಾನು ನಿನ್ನನ್ನು ಹೊಡಿದಿದ್ದೇನೆ. ನಾನು ಒಬ್ಬ ಗಂಡಸು. ಮುಂದಿನ ನಗರಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಬಾವುಟ ಹಾರಿಸುತ್ತೇನೆ ಎಂದು ಹೇಳಿದರು.
ಶಾಸಕ ಪ್ರದೀಪ್ ಈಶ್ವರ್, ಸಂಸದ ಡಾ ಕೆ.ಸುಧಾಕರ್ ಮಧ್ಯೆ ಭಾರೀ ಜಿದ್ದಾಜಿದ್ದಿಗೆ ಕಾರಣವಾಗಿದ್ದ ಚಿಕ್ಕಬಳ್ಳಾಪುರ ನಗರಸಭೆ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಚುನಾವಣೆ ಮತದಾನ ನಡೆದಿದ್ದು, ನ್ಯಾಯಾಲಯದ ನಿರ್ದೇಶನದ ಮೇರೆಗೆ ಫಲಿತಾಂಶ ಕಾಯ್ದಿರಿಸಲಾಗಿದೆ. ಆದರೂ ಚುನಾವಣೆಯಲ್ಲಿ ಜಯಗಳಿಸಿದ್ದೇವೆ ಎಂದು ಬಿಜೆಪಿಯವರು ವಿಜಯೋತ್ಸವ ಆಚರಿಸಿದ್ದಾರೆ.