ಅಮೇರಿಕಾದಲ್ಲಿ ಭಾರತದ ಕುರಿತು ಆಕ್ಷೇಪಾರ್ಹ ರೀತಿಯಲ್ಲಿ ಹೇಳಿಕೆ ನೀಡಿದ್ದ ವಿಪಕ್ಷ ನಾಯಕ ರಾಹುಲ್ ಗಾಂಧಿ ವಿರುದ್ಧ ಟಿಕಾ ಪ್ರಹಾರ ನಡೆಸುವ ಭರದಲ್ಲಿ ಕೇಂದ್ರ ಸಚಿವ ರಣ್ವೀತ್ ಸಿಂಘ್ ಬಿಟ್ಟು ಯಡವಟ್ಟು ಮಾಡಿಕೊಂಡಿದ್ದಾರೆ. ಅಮೇರಿಕಾ ಪ್ರವಾಸದ ವೇಳೆ ರಾಹುಲ್ ಗಾಂಧಿ, ಭಾರತದಲ್ಲಿ ಸಿಖ್ ಸಮುದಾಯದ ಪರಿಸ್ಥಿತಿಯ ಬಗ್ಗೆ ಮಾತನಾಡಿದ್ದು ವಿವಾದಕ್ಕೆ ಗುರಿಯಾಗಿತ್ತು.
ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಕೇಂದ್ರ ಸಚಿವ ರಣ್ವೀತ್ ಸಿಂಗ್ ಬಿಟ್ಟು, ಆ ಬಾಂಬ್ ತಯಾರಕರು ಆತನನ್ನು ಬೆಂಬಲಿಸುತ್ತಿದ್ದಾರೆ ಎಂದಾದರೆ ಆತ ನಂ.1 ಭಯೋತ್ಪಾದಕ ಎಂದು ಹೇಳಿದ್ದಾರೆ. ಬಿಟ್ಟು ಮೋದಿ ಕ್ಯಾಬಿನೆಟ್ ನಲ್ಲಿ ರೈಲ್ವೆ ಖಾತೆ ರಾಜ್ಯ ಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಹೌರಾಗೆ ವಂದೇ ಭಾರತ್ ರೈಲು ಸಂಪರ್ಕಕ್ಕೆ ಹಸಿರು ನಿಶಾನೆಯ ಕಾರ್ಯಕ್ರಮದಲ್ಲಿ ಬಿಟ್ಟು ಈ ಹೇಳಿಕೆ ನೀಡಿದ್ದಾರೆ. ಬಿಟ್ಟು ಹೇಳಿಕೆಯನ್ನು ಕಾಂಗ್ರೆಸ್ ಖಂಡಿಸಿದ್ದು, ಕೇಂದ್ರ ಸಚಿವರು ಸಂವೇದನಾರಹಿತ ವ್ಯಕ್ತಿಯಂತೆ ಮಾತನಾಡುತ್ತಿದ್ದಾರೆ ಎಂದು ಟೀಕಿಸಿದೆ.