ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ವಿಜಯೇಂದ್ರ ಅವರನ್ನು ನಾವು ಇನ್ನೂ ಒಪ್ಪಿಲ್ಲ ಎಂದು ಶಾಸಕ ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ಭಾನುವಾರ ಗೋಕಾಕ್ ನಗರದ ತಮ್ಮ ಗೃಹಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ವಿಜಯೇಂದ್ರರನ್ನು ನಾವು ಇನ್ನೂ ಒಪ್ಪಿಲ್ಲ. ನಮಗೇನಿದ್ರೂ ಹೈಕಮಾಂಡ್, ಹೈಕಮಾಂಡ್ ಅಪ್ಪಣೆ ಮೇರೆಗೆ ನಾನು ಕಾರ್ಯನಿರ್ವಹಿಸುತ್ತೇನೆಯೇ ವಿನಃ ರಾಜ್ಯ ನಾಯಕರ ಅಪ್ಪಣೆ ಮೇರೆಗೆ ಅಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ವಿರುದ್ಧ ಪರೋಕ್ಷವಾಗಿ ಅವರು ಅಸಮಾಧಾನ ಹೊರಹಾಕಿದರು.