- ರೇಣುಕಾ ಸ್ವಾಮಿ ಕೊಲೆ ಕೇಸ್ನಲ್ಲಿ ಹಾಸ್ಯನಟ ಚಿಕ್ಕಣ್ಣಗೆ ನೋಟಿಸ್
- ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಪೊಲೀಸರ ಸಿದ್ಧತೆ
ರೇಣುಕಾ ಸ್ವಾಮಿ ಕೊಲೆ ಕೇಸ್ನಲ್ಲಿ ದರ್ಶನ್ ಅರೆಸ್ಟ್ ಆಗಿದ್ದಾರೆ. ದರ್ಶನ್ ಜೊತೆ ಪವಿತ್ರಾ ಗೌಡ ಸೇರಿ 19 ಮಂದಿ ಬಂಧನಕ್ಕೆ ಒಳಗಾಗಿದ್ದಾರೆ. ಈ ಪ್ರಕರಣದಲ್ಲಿ ಹೊಸ ಹೊಸ ಹೆಸರುಗಳು ಕೇಳಿ ಬರುತ್ತಿವೆ. ವಿಶೇಷ ಎಂದರೆ ಹಾಸ್ಯನಟ ಚಿಕ್ಕಣ್ಣಗೆ ನೋಟಿಸ್ ನೀಡಲು ಪೊಲೀಸರು ಸಿದ್ಧತೆ ಮಾಡಿಕೊಂಡಿದ್ದಾರೆ.
ನಟ ದರ್ಶನ್ ಶೆಡ್ಗೆ ಹೋಗುವ ಮೊದಲು ಖಾಸಗಿ ರೆಸ್ಟೋರೆಂಟ್ನಲ್ಲಿ ಪಾರ್ಟಿ ಮಾಡಿದ್ದರು. ಈ ಪಾರ್ಟಿಯಲ್ಲಿ ನಟ ಚಿಕ್ಕಣ್ಣ, ನಿರ್ಮಾಪಕರು ಭಾಗಿಯಾಗಿದ್ದರು. ಪಾರ್ಟಿಯಿಂದ ಎದ್ದು ನಟ ದರ್ಶನ್ ಮನೆಗೆ ಹೊಗಬೇಕಿತ್ತು. ಆದರೆ ಅವರು ತೆರಳಿದ್ದು ಪಟ್ಟಣಗೆರೆ ಶೆಡ್ಗೆ. ಪಾರ್ಟಿ ಮುಗಿಸಿ ಬಂದು ಹಲ್ಲೆಗೈದು ರೇಣುಕಾಸ್ವಾಮಿ ಹತ್ಯೆ ಮಾಡಿದ್ದಾರೆ ಎನ್ನಲಾಗಿದೆ.
ಪಾರ್ಟಿಯಲ್ಲಿ ದರ್ಶನ್ ಜೊತೆ ಭಾಗಿಯಾದ ಹಿನ್ನೆಲೆಯಲ್ಲಿ ಚಿಕ್ಕಣ್ಣಗೆ ನೋಟಿಸ್ ನೀಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲು ಅನ್ನಪೂರ್ಣೇಶ್ವರಿನಗರ ಪೊಲೀಸರು ಸಿದ್ಧತೆ ಮಾಡಿಕೊಂಡಿದ್ದಾರೆ. ಇಂದು (ಜೂನ್ 17) ಸಂಜೆಯೇ ನೋಟಿಸ್ ನೀಡಲು ಸಿದ್ಧತೆ ನಡೆದಿದೆ ಎಂದು ಹೇಳಲಾಗುತ್ತಿದೆ.