ಸಾಕು ಬೆಕ್ಕು ಕಚ್ಚಿ ಮಹಿಳೆ ಸಾವನ್ನಪ್ಪಿದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಇಲ್ಲಿನ ಶಿಕಾರಿಪುರ ತಾಲೂಕಿನ ತರಲಘಟ್ಟದಲ್ಲಿ ದುರ್ಘಟನೆ ಸಂಭವಿಸಿದೆ. 50 ವರ್ಷ ವಯಸ್ಸಿನ ಗಂಗೀಬಾಯಿ ಎಂಬ ಮಹಿಳೆ ಸಾವನ್ನಪ್ಪಿದ್ದಾರೆ. ಮೊದಲು ತರಲಘಟ್ಟದ ಕ್ಯಾಂಪ್ನಲ್ಲಿರುವ ಯುವನೋರ್ವನ ಮೇಲೆ ದಾಳಿ ಮಾಡಿತ್ತು. ಬಳಿಕ ಬೆಕ್ಕು ಎರಡು ತಿಂಗಳ ಹಿಂದೆ ಮಹಿಳೆಗೆ ಕಚ್ಚಿತ್ತು. ಬೆಕ್ಕು ಕಚ್ಚಿದ ಪರಿಣಾಮ ರೇಬಿಸ್ ಕಾಯಿಲೆಗೆ ಮಹಿಳೆಯು ಮೃತಪಟ್ಟಿದ್ದಾಳೆ.
ಮೊದಲು ತರಲಘಟ್ಟದ ಕ್ಯಾಂಪ್ನಲ್ಲಿರುವ ಯುವನೋರ್ವನ ಮೇಲೆ ದಾಳಿ ಮಾಡಿತ್ತು. ಬಳಿಕ ಮಹಿಳೆಯ ಮೇಲೂ ದಾಳಿ ಮಾಡಿತ್ತು. ಮಹಿಳೆ ಕಾಲಿಗೆ ಕಚ್ಚಿದ ಕಾರಣ ಐದು ಇಂಜೆಕ್ಷನ್ ತೆಗೆದುಕೊಳ್ಳಬೇಕಿತ್ತು. ಆದರೆ ಒಂದು ಇಂಜೆಕ್ಷನ್ ಪಡೆದು ಹುಷಾರಾಗಿದ್ದಳು. ಈ ಕಾರಣಕ್ಕೆ ಮಹಿಳೆ ಚೇತರಿಕೆ ಕಂಡ ಹಿನ್ನೆಲೆ ಇಂಜೆಕ್ಷನ್ ಪಡೆಯದೆ ಸುಮ್ಮನಾಗಿದ್ದಳು.
ಚೇತರಿಕೆ ಕಂಡ ಹುಮ್ಮಸ್ಸಿನಲ್ಲಿ ಮಹಿಳೆ ಇಂಜೆಕ್ಷನ್ ತೆಗೆದುಕೊಳ್ಳುವುದಕ್ಕೆ ನಿರ್ಲಕ್ಷ ಮಾಡಿದ್ದಳು. ಈ ಹಿನ್ನಲೆಯಲ್ಲಿ ಮೊನ್ನೆಯಿಂದ ಬೆಕ್ಕು ಕಚ್ಚಿದ ಮಹಿಳೆಯ ಆರೋಗ್ಯದಲ್ಲಿ ಏರುಪೇರು ಶುರುವಾಗಿತ್ತು. ದೇಹದಲ್ಲಿ ನಂಜು ಏರುತ್ತಲೇ ಹೋಗಿತ್ತು. ಶಿವಮೊಗ್ಗದ ಮೆಗ್ಗಾನ್ ಜಿಲ್ಲಾಸ್ಪತ್ರೆಗೆಯಲ್ಲಿ ಮಹಿಳೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಮಹಿಳೆಯು ಇಂದು ಮೃತಪಟ್ಟಿದ್ದಾಳೆ.
ಇನ್ನು ಇದೇ ಬೆಕ್ಕು ಯಜಮಾನಿನನ್ನ ಕಚ್ಚುವ ಮುನ್ನ ಬೆಕ್ಕು ನಾಯಿಯ ಮರಿಯನ್ನ ಕಚ್ಚಿತ್ತು. ಅಲ್ಲದೇ ಈ ಬೆಕ್ಕು ತರಲಘಟ್ಟದ ಕ್ಯಾಂಪ್ ನಲ್ಲಿ ಯುವನೋರ್ವನ ಮೇಲೆ ದಾಳಿ ನಡೆಸಿ ಕಾಲಿಗೆ ಕಚ್ಚಿತ್ತು. ಯುವಕನ ಕಾಲಿಗೆ ಆಯರ್ವೇದ ಔಷಧ ಮಾಡಿ ಪರಿಣಾಮ ನಂಜು ತೆಗೆಸಲಾಗಿತ್ತು. ಪರಿಣಾಮ ಯುವಕ ಪ್ರಾಣಾಪಾಯದಿಂದ ಪಾರು ಆಗಿದ್ದಾನೆ.
ಇನ್ನು ಈ ಬಗ್ಗೆ ಮೆಗ್ಗಾನ್ ಜಿಲ್ಲಾಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಟಿ.ಡಿ ತಿಮ್ಮಪ್ಪ ಪ್ರತಿಕ್ರಿಯಿಸಿದ್ದು, ನಾಯಿಯು ಬೆಕ್ಕಿಗೆ ಕಚ್ಚಿರಬೇಕು. ನಾಯಿಯ ರೇಬಿಸ್ ಮಹಿಳೆಗೆ ಕಚ್ಚಿದ ಬೆಕ್ಕಿಗೆ ಬಂದಿದೆ. ಅದೇ ಬೆಕ್ಕು ಮಹಿಳೆಗೆ ಕಚ್ಚಿದೆ. ಇದರಿಂದ ಮಹಿಳೆಯು ಮೃತಪಟ್ಟಿದ್ದಾಳೆ ಎಂದು ಸ್ಪಷ್ಟಪಡಿಸಿದ್ದಾರೆ.