ಪರಪ್ಪನ ಅಗ್ರಹಾರ ಜೈಲಿನಿಂದ ಆಚೆಬಂದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಸೂರಜ್, ತನಿಖಾಧಿಕಾರಿಗಳಿಗೆ ಸಹಕಾರ ನೀಡಿದ್ದೇನೆ. ಕಾನೂನು ನ್ಯಾಯಾಂಗದ ಮೇಲೆ ಸಂಪೂರ್ಣ ವಿಶ್ವಾಸವಿದೆ. ಇದು ಕೇಸ್ ಅಲ್ಲ, ಷಡ್ಯಂತ್ರ ಕುತಂತ್ರ. ಶಿವಕುಮಾರ್ ಆಪ್ತ ಸಹಾಯಕನಲ್ಲ, ಕಾರು ಚಾಲಕನೂ ಅಲ್ಲ. ನಮಗೆ ಲೋಕೇಶ್ ಅಂತಾ ಒಬ್ಬನೇ ಕಾರು ಚಾಲಕ. ಹಾಸನದಲ್ಲಿ ರೇವಣ್ಣರಿಗಾಗಲಿ ನಮಗಾಗಲಿ ಕಪ್ಪುಚುಕ್ಕೆ ಇಲ್ಲ. ರಾಜಕೀಯವಾಗಿ ನಮ್ಮನ್ನು ಕುಗ್ಗಿಸುವ ಷಡ್ಯಂತ್ರ ನಡೆಯುತ್ತಿದೆ ಎಂದು ತಿಳಿಸಿದರು. ಮೊದಲ ದಿನದಿಂದಲೂ ತನಿಖೆಗೆ ಸಹಕರಿಸಿದ್ದೇನೆ. ನಾನೇನು ಹೆದರಿಕೊಂಡು ಎಲ್ಲಿಯೋ ಓಡಿಹೋಗಲ್ಲ ಎಂದು ಖಡಕ್ ಆಗಿ ಹೇಳಿದರು.
ನಮ್ಮ ಕುಟುಂಬ ಮತ್ತು ಹಾಸನ ಜಿಲ್ಲೆಯ ರಾಜಕಾರಣವನ್ನ ಕುಸಿತಗೊಳಿಸಬೇಕು ಅಂದುಕೊಂಡಿದ್ದಾರೆ. ಯಾರು ಎಂಬುವ ಬಗ್ಗೆ ಎಲ್ಲದಕ್ಕೂ ಸದ್ಯದಲ್ಲೇ ಉತ್ತರವನ್ನ ಕೊಡ್ತೀನಿ. ಮೊದಲನೇ ದಿನದಿಂದಲೂ ತನಿಖೆಗೆ ಸಹಕರಿಸುತ್ತೇದ್ದೇನೆ. ನಾನು ಯಾವುದೇ ತಪ್ಪು ಮಾಡಿಲ್ಲ, ನಾನು ಓಡೋಗೋದಿಲ್ಲ. ನನಗೆ ನ್ಯಾಯಾಂಗ ಮತ್ತು ಕಾನೂನಿನ ಮೇಲೆ ಸಂಪೂರ್ಣ ನಂಬಿಕೆ ಇದೆ ಎಂದರು.