ಅಪಘಾತದಿಂದ ತಲೆಗೆ ಪೆಟ್ಟಾಗಿ ಆಸ್ಪತ್ರೆ ಸೇರಿದ ಸೈಯದ್ ಜಾವೇದ್ ಅವರ ಆರೋಗ್ಯವನ್ನು ಇಂಧನ ಸಚಿವ ಕೆ ಜೆ ಜಾರ್ಜ್ ವಿಚಾರಿಸಿದರು. ಇಂದು ಅಂಬೇಡ್ಕರ್ ವೈದ್ಯಕೀಯ ಕಾಲೇಜಿಗೆ ಭೇಟಿ ನೀಡಿದ ಕೆಜೆ ಜಾರ್ಜ್ ಅವರು ಜಾವೇದ್ ಆರೋಗ್ಯದ ಬಗ್ಗೆ ಮಾಹಿತಿ ಪಡೆದರು. ಸಚಿವ ಕೆಜೆ ಜಾರ್ಜ್ ಅವರು ದುಃಖಿತ ಕುಟುಂಬದೊಂದಿಗೆ ಮಾತನಾಡಿ ಅಗತ್ಯವಿರುವ ಎಲ್ಲಾ ಬೆಂಬಲ ಮತ್ತು ಸಹಾಯವನ್ನು ಒದಗಿಸುವುದಾಗಿ ತಿಳಿಸಿದರು.