ತುಂಗಭದ್ರಾ ಜಲಾಶಯದ ಚೈನ್ ಕಟ್ ಹಿನ್ನೆಲೆ ಡ್ಯಾಂನಲ್ಲಿ ಭಾರೀ ನೀರು ಪೋಲಾಗುತ್ತಿದ್ದು, ಅಣೆಕಟ್ಟೆಯ ಸದ್ಯದ ಸ್ಥಿತಿಗತಿ ತಿಳಿಯುವ ಸಲುವಾಗಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಭಾನುವಾರ ಮಧ್ಯಾಹ್ನ ಭೇಟಿ ನೀಡಲಿದ್ದಾರೆ. ಜಲಾಶಯಕ್ಕೆ ಭೇಟಿ ನೀಡಿ ಡಿಸಿಎಂ ಡಿಕೆ ಶಿವಕುಮಾರ್ ಅವರು ಪರಿಶೀಲನೆ ನಡೆಸಲಿದ್ದಾರೆ. ಶೀಘ್ರ ದುರಸ್ತಿ ಕಾರ್ಯ ಕೈಗೊಳ್ಳುವ ಕುರಿತು ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಲಿದ್ದಾರೆ.
ಸಚಿವರ ಜತೆಗೆ ನೀರಾವರಿ ಇಲಾಖೆಯ ಹಿರಿಯ ಅಧಿಕಾರಿಗಳು ಬರಲಿದ್ದಾರೆ. ಮತ್ತೊಂದೆಡೆ ಹೈದರಾಬಾದ್ ಮತ್ತು ಚೆನ್ನೈಗಳಿಂದಲೂ ನೀರಾವರಿ ತಜ್ಞರು, ಎಂಜಿನಿಯರ್ಗಳು ಭೇಟಿ ನೀಡಲಿದ್ದಾರೆ ಎಂದು ತುಂಗಭದ್ರಾ ಮಂಡಳಿಯ ಮೂಲಗಳು ತಿಳಿಸಿವೆ.