ಬೆಳ್ಳಂಬೆಳಗ್ಗೆ ಬಸ್ ಹರಿದು ವ್ಯಕ್ತಿಯೋರ್ವ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ವಿಜಯಪುರ ನಗರದ ಬಸವೇಶ್ವರ ವೃತ್ತದಲ್ಲಿ ನಡೆದಿದೆ. ಬಸ್ ಅಪಘಾತದಲ್ಲಿ ವ್ಯಕ್ತಿ ರಸ್ತೆಗೆ ಬಿದ್ದು ಅಲ್ಲೇ ಉಚಿರು ಚೆಲ್ಲಿದ್ದಾರೆ.
ವಿಜಯಪುರ ನಗರದ ಬಸವೇಶ್ವರ ವೃತ್ತದಲ್ಲಿ ಬಸ್ ಹರಿದು ವ್ಯಕ್ತಿಯೋರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಸಾವನ್ನಪ್ಪಿದ ವ್ಯಕ್ತಿಯನ್ನು ಅಶೋಕ ಪರ್ಜೆನವರ್ ಎಂದು ಗುರುತಿಸಲಾಗಿದೆ. ನಡು ರಸ್ತೆಯಲ್ಲೇ ರಕ್ತದ ಮಡುವಿನಲ್ಲಿ ವ್ಯಕ್ತಿ ಸಾವನ್ನಪ್ಪಿದ್ದಾರೆ.ಖಾಸಗಿ ಬಸ್ನಡಿಗೆ ಬಿದ್ದು ಅಶೋಕ ಕೊನೆಯುಸಿರು ಚೆಲ್ಲಿದ್ದಾರೆ. ಬಸ್ ಬೆಂಗಳೂರಿನಿಂದ ವಿಜಯಪುರಕ್ಕೆ ಕಡೆಗೆ ಬರುತ್ತಿತ್ತು ಎಂದು ತಿಳಿದುಬಂದಿದೆ.ಸರ್ಕಲ್ ನಲ್ಲಿ ರಸ್ತೆ ದಾಟುತ್ತಿದ್ದ ಅಶೋಕ ಮೇಲೆ ಖಾಸಗಿ ಬಸ್ ಹರಿದಿದೆ. ವಿಜಯಪುರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.