ಕೇರಳದ ವಯನಾಡು ಜಿಲ್ಲೆಯಲ್ಲಿ ಸಂಭವಿಸಿದ ಸರಣಿ ಭೂಕುಸಿತದಲ್ಲಿ ಮೃತಪಟ್ಟವರ ಸಂಖ್ಯೆ 350ಕ್ಕೂ ಅಧಿಕವಿದೆ. ಇನ್ನು 66 ಮೃತದೇಹಗಳ ಗುರುತೇ ಸಿಕ್ಕಿಲ್ಲ. ಇಂತಹ ಶವಗಳ ಡಿಎನ್ಎ ಸ್ಯಾಂಪಲ್ ಪಡೆದಿರೋ ಕೇರಳ ಸರ್ಕಾರ, ಪುತ್ತುಮಲಾ ಅನ್ನೋ ಏರಿಯಾದಲ್ಲಿ ಸಾಮೂಹಿಕ ಅಂತ್ಯಕ್ರಿಯೆ ನಡೆಸಿದೆ. ಈ ದುರಂತದ ಬಳಿಕ ವಯನಾಡು ಜಿಲ್ಲಾಡಳಿತ ಜನರಿಗಾಗಿ ನಿಂತಿದೆ. ಹಗಲಿರುಳು ಕೆಲಸ ಮಾಡುತ್ತಿದೆ. ಈ ನಡುವೆ ಜಿಲ್ಲಾಧಿಕಾರಿ, ಕನ್ನಡತಿ ತಮ್ಮ ಉತ್ತಮ ಕೆಲಸದ ಮೂಲಕ ಜನರ ಗಮನ ಸೆಳೆದಿದ್ದಾರೆ.
ವಯನಾಡ್ ಡಿಸಿ ಆಗಿರುವ ಮೇಘಶ್ರೀ ಅವರು ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ದೊಡ್ಡೇರಿ ಗ್ರಾಮದವರು. ಸದ್ಯ ಈಗ ಕೋಟೆನಾಡಿನ ಸುಪುತ್ರಿ ಬಗ್ಗೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಜಿಲ್ಲಾಧಿಕಾರಿ ಡಿ. ಆರ್. ಮೇಘಶ್ರೀ ಅವರು ದುರಂತ ನಡೆದ ಬಳಿಕ ಮುಂಜಾನೆ 3 ಗಂಟೆಯಿಂದ ಕೆಲಸ ಮಾಡುತ್ತಿದ್ದಾರೆ. ಜುಲೈ 10ರಂದು ಮೇಘಶ್ರೀ ಜಿಲ್ಲಾಧಿಕಾರಿಯಾಗಿ ಅಧಿಕಾರವಹಿಸಿಕೊಂಡರು. ಜಿಲ್ಲಾಧಿಕಾರಿಯಾಗಿ ಆಗಮಿಸಿದ ಕೆಲವೇ ದಿನಗಳಲ್ಲಿ ಅವರು ಅತಿ ದೊಡ್ಡ ಸವಾಲು ಎದುರಿಸಿದ್ದಾರೆ. ಮೇಘಶ್ರೀ ಅವರ ಕಾರ್ಯ ವೈಕರಿಗೆ ಜನ ಫಿದಾ ಆಗಿದ್ದಾರೆ.