ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸೋಮವಾರ ಮತ್ತು ಮಂಗಳವಾರ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ ನಡೆಸುತ್ತಿದೆ. ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ವಿಚಾರಣೆಗೆ ಹಾಜರಾಗುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ಪಾರ್ವತಿ ಮತ್ತು ಸಚಿವ ಭೈರತಿ ಸುರೇಶ್ ನೋಟಿಸ್ ಜಾರಿ ಮಾಡಿದೆ. ಇಡಿ ನೋಟಿಸ್ ನೀಡುತ್ತಿದ್ದಂತೆ ಪಾರ್ವತಿ ಸಿದ್ದರಾಮಯ್ಯ ಮತ್ತು ಭೈರತಿ ಸುರೇಶ್ ಧಾರವಾಡ ಏಕಸದಸ್ಯ ಪೀಠಕ್ಕೆ ಎರಡು ಪ್ರತ್ಯೇಕ ಅರ್ಜಿ ಸಲ್ಲಿಸಿದ್ದಾರೆ. ಇದರಿಂದ ಸಿಎಂಗೆ ಸಂಕಷ್ಟ ಹೆಚ್ಚಾಗಿದೆ.
ಈ ಸಂಬಂಧ ತುರ್ತು ವಿಚಾರಣೆ ನಡೆಸುವಂತೆ ಹಿರಿಯ ವಕೀಲ ವಿಕ್ರಮ್ ಹುಯಿಲಗೋಳ್ ಪೀಠಕ್ಕೆ ಮನವಿ ಮಾಡಿದರು. ಸೋಮವಾರ ಕಲಾಪದ ಕೊನೆಗೆ ವಿಚಾರಣೆ ನಡೆಸುವುದಾಗಿ ನ್ಯಾ.ಎಂ.ನಾಗಪ್ರಸನ್ನ ಒಪ್ಪಿಗೆ ಸೂಚಿಸಿದರು.
300 ಕೋಟಿ ಮೌಲ್ಯದ ಸ್ಥಿರಾಸ್ತಿ ಮುಟ್ಟುಗೋಲು
ಹಗರಣಕ್ಕೆ ಸಂಬಂಧಿಸಿದಂತೆ ಇಡಿ ಈಗಾಗಲೆ ಸುಮಾರು 300 ಕೋಟಿ ರೂ. ಮೌಲ್ಯದ 142 ಸ್ಥಿರಾಸ್ತಿ ಮುಟ್ಟುಗೋಲು ಹಾಕಿಕೊಂಡಿದೆ. ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ ಅಡಿಯಲ್ಲಿ ರಿಯಲ್ ಎಸ್ಟೇಟ್ ಉದ್ಯಮಿಗಳು, ಏಜೆಂಟ್ಗಳು ಸೇರಿದಂತೆ ವಿವಿಧ ವ್ಯಕ್ತಿಗಳ ಹೆಸರಿನಲ್ಲಿದ್ದ ಪ್ರಾಪರ್ಟಿ, ನಿವೇಶನ, ಜಮೀನು ಸೇರಿದಂತೆ ಇನ್ನಿತರ ಆಸ್ತಿ ಒಳಗೊಂಡಂತೆ ಅಂದಾಜು 300 ಕೋಟಿ ರೂ. ಮೌಲ್ಯದ 142 ಸ್ಥಿರ ಆಸ್ತಿಗಳನ್ನು ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಂಡಿತ್ತು.
ಜಯರಾಮ್, ರಾಕೇಶ್ ಪಾಪಣ್ಣ ರಿಯಲ್ ಎಸ್ಟೇಟ್ ಉದ್ಯಮಿಗಳಾಗಿದ್ದು, ಮಂಜುನಾಥ್ ಹಾಗೂ ತೇಜಸ್ ಎಂದುವವರಿಗೆ ಸೇರಿದ ಆಸ್ತಿ ಜಪ್ತಿ ಮಾಡಲಾಗಿತ್ತು. ಈ ಹಿಂದೆ ಮುಡಾ ಆಯುಕ್ತರಾಗಿದ್ದ ನಟೇಶ್ ಮತ್ತು ದಿನೇಶ್ ಆಸ್ತಿ ಕೂಡ ಜಪ್ತಿ ಮಾಡಿದ್ದು, ಮತ್ತಷ್ಟು ಹೆಸರುಗಳು ಇಡಿ ಪಟ್ಟಿಯಲ್ಲಿರುವ ಇರುವ ಸಾಧ್ಯತೆ ಇದೆ.
ಮತ್ತೊಂದು ಜಯವೆಂದ ಸ್ನೇಹಮಯಿಕೃಷ್ಣ
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದವರು 300 ಕೋಟಿ ರೂ. ಬೆಲೆ ಬಾಳುವ 142 ಸ್ವತ್ತುಗಳನ್ನು ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಂಡಿದ್ದಾರೆ. ನಿಮ್ಮಗಳ ಹಾರೈಕೆಯಿಂದ ನನ್ನ ಹೋರಾಟಕ್ಕೆ ದೊರೆತ ಮತ್ತೊಂದು ಜಯ ಎಂದು ಸ್ನೇಹಮಯಿಕೃಷ್ಣ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡಿದ್ದರು.
ಗ್ಯಾರಂಟಿ ನ್ಯೂಸ್ ವಾಟ್ಸಾಪ್ ಚಾನೆಲ್ ಫಾಲೋ ಮಾಡಿ: https://whatsapp.com/channel/0029VafyCqRFnSzHn1JWKi1B
ಜೊತೆಯಲ್ಲೇ ಗ್ಯಾರಂಟಿ ನ್ಯೂಸ್ ಸಮುದಾಯವನ್ನು ಸೇರಲು ಈ ಲಿಂಕ್ ಕ್ಲಿಕ್ಕಿಸಿ: https://chat.whatsapp.com/HWayJDSBf9aI06q6jplPgc