ಆಂಧ್ರಪ್ರದೇಶದ ಮಾಜಿ ಸಿಎಂ ಜಗನ್ಮೋಹನ್ ರೆಡ್ಡಿ ವಿರುದ್ಧ ಕೊಲೆ ಯತ್ನ ಕೇಸ್ ದಾಖಲಾಗಿದೆ. ಟಿಡಿಪಿ ಶಾಸಕ ಕೆ.ರಘುರಾಮ ಕೃಷ್ಣರಾಜು ದೂರಿನ ಮೇರೆಗೆ ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ಮತ್ತು ಇಬ್ಬರು ಹಿರಿಯ ಐಪಿಎಸ್ ಅಧಿಕಾರಿಗಳು ಸೇರಿದಂತೆ ಐವರ ವಿರುದ್ಧ ಕೊಲೆ ಯತ್ನ ಪ್ರಕರಣ ದಾಖಲಾಗಿದೆ. ಸಿಐಡಿ ಮಾಜಿ ಮುಖ್ಯಸ್ಥ ಪಿವಿ ಸುನೀಲ್ ಕುಮಾರ್ ಮತ್ತು ಗುಪ್ತಚರ ಮಾಜಿ ಮುಖ್ಯಸ್ಥ ಪಿಎಸ್ಆರ್ ಆಂಜನೇಯುಲು ಇಬ್ಬರು ಐಪಿಎಸ್ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಜಗನ್ ಮೋಹನ್ ರೆಡ್ಡಿ ಮತ್ತು ಇತರ ಅಧಿಕಾರಿಗಳು ತಮ್ಮ ವಿರುದ್ಧ ಕ್ರಿಮಿನಲ್ ಪಿತೂರಿ ನಡೆಸುತ್ತಿದ್ದಾರೆ ಎಂದು ಅವರು ಆರೋಪಿಸಿದರು.
2021ರಲ್ಲಿ ಸಿಐಡಿ ಅಧಿಕಾರಿಗಳು ಅವರನ್ನು ಹೈದರಾಬಾದ್ನಿಂದ ಬಂಧಿಸಿದ್ದರು, ನನ್ನನ್ನು ಎಳೆದುಕೊಂಡು ಹೋಗಿ ಬೆಲ್ಟ್, ದೊಣ್ಣೆಯಿಂದ ಥಳಿಸಿದ್ದರು. ಹೃದಯ ಸಂಬಂಧಿ ಸಮಸ್ಯೆ ಇದ್ದರೂ ಔಷಧಿ ತೆಗೆದುಕೊಳ್ಳಲು ಕೂಡ ಅವಕಾಶ ಮಾಡಿಕೊಡಲಿಲ್ಲ, ನಾನು ಬೈಪಾಸ್ ಸರ್ಜರಿಗೆ ಒಳಗಾಗಿರುವುದು ಕೂಡ ಅವರಿಗೆ ತಿಳಿದಿತ್ತು ಎಂದು ಉಂಡಿ ಶಾಸಕ ಕೆ.ರಘುರಾಮ ಕೃಷ್ಣರಾಜು ಆರೋಪಿಸಿದ್ದಾರೆ