ರಾಜ್ಯ ಕಾಂಗ್ರೆಸ್ ಸರ್ಕಾರ ಬೆಂಗಳೂರಿನಲ್ಲಿ ಕಸ ಎತ್ತುವ ನೆಪದಲ್ಲಿ ಖಾಸಗಿ ಕಂಪನಿ ಮೂಲಕ 45 ಸಾವಿರ ಕೋಟಿ ಲೂಟಿ ಹೊಡೆಯುತ್ತಿದ್ದಾರೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಆರೋಪ ಮಾಡಿದ್ದಾರೆ. ಕಪ್ಪು ಪಟ್ಟಿಯಲ್ಲಿರುವ ಕಂಪನಿಗೆ ಕಸ ಎತ್ತಲು ಗುತ್ತಿಗೆ ಕೊಡುತ್ತಿದ್ದಾರೆ. 30 ವರ್ಷಕ್ಕೆ ಗುತ್ತಿಗೆ ಕೊಡುವುದಕ್ಕೆ ಪ್ಲ್ಯಾನ್ ಮಾಡುತ್ತಿದ್ದಾರೆ. ಗ್ರೇಟರ್ ಬೆಂಗಳೂರು ಹೆಸರಲ್ಲಿ ಕಸದ ಟೆಂಡರ್ ಮೂಲಕ ಮೂಲಕ 10-15 ಕೋಟಿ ಸಾವಿರ ಕೋಟಿ ರೂಪಾಯಿ ಲೂಟಿ ಹೊಡೆಯುವ ಪ್ಲ್ಯಾನ್ ಇದೆ ಎಂದು ಪರೋಕ್ಷವಾಗಿ ಡಿಸಿಎಂ ಡಿಕೆಶಿ ವಿರುದ್ಧ ಕೇಂದ್ರ ಸಚಿವ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.
ಇದೇ ವೇಳೆ ರಾಮನಗರಕ್ಕೆ ಬೆಂಗಳೂರು ದಕ್ಷಿಣ ಎಂಬ ಹೆಸರಿಡುವ ವಿಚಾರಕ್ಕೆ ಸಂಬಂಧಿಸಿದಂತೆ ವಾಗ್ದಾಳಿ ನಡೆಸಿದ ಕೇಂದ್ರ ಸಚಿವ H.D.ಕುಮಾರಸ್ವಾಮಿ, ಇವರು ಬೆಂಗಳೂರು ದಕ್ಷಿಣ ಅಂತೆ ನಾವು ಹಾಸನದವರಂತೆ. ನಾನು ಸತ್ತರೆ ಮಣ್ಣಿಗೆ ಹೋಗೋದು ರಾಮನಗರದಲ್ಲಿ ಎಂದು ಹೇಳಿದ್ದಾರೆ.