ಮಹಿಳಾ ಅಭಿಮಾನಿಯೊಬ್ಬಕೆ ದರ್ಶನ್ ನೋಡಲು ಬಳ್ಳಾರಿ ಸೆಂಟ್ರಲ್ ಜೈಲ್ ಮುಂಭಾಗ ಬಂದು ಹೈ ಡ್ರಾಮಾ ಮಾಡಿರೋ ಸಂಗತಿ ಬೆಳಕಿಗೆ ಬಂದಿದೆ. ವಿಜಯಲಕ್ಷ್ಮಿ ತರ ನಾನು ಮದುವೆ ಆಗ್ತೀನಿ, ನನಗೆ ದರ್ಶನ್ ಇಷ್ಟ ಎಂದು ಹೇಳಿದ್ದಾರೆ.
ಲಕ್ಷ್ಮೀ ಎಂಬ ಮಹಿಳಾ ಅಭಿಮಾನಿ ದರ್ಶನ್ ನೊಡಲೇಬೇಕು ಅಂತಾ ಬಳ್ಳಾರಿ ಸೆಂಟ್ರಲ್ ಜೈಲ್ ಬಳಿ ಬಂದಿದ್ದಾರೆ. ಬೆಂಗಳೂರಿಂದ ಬಳ್ಳಾರಿ ಸೆಂಟ್ರಲ್ ಜೈಲಿಗೆ ಹಣ್ಣು ಹಂಪಲು, ಜೊತೆಗೆ ಆಧಾರ್ ಕಾರ್ಡ್ ಹಿಡಿದು ಬಂದಿದ್ದಾರೆ. ಈ ವೇಳೆ ಜೈಲು ಸಿಬ್ಬಂದಿ ಅವರನ್ನು ತಡೆದಿದ್ದಾರೆ.
ಮಾಧ್ಯಮದವರ ಮುಂದೆ ಮಾತನಾಡಿದ ಮಹಿಳಾ ಅಭಿಮಾನಿ, ವಿಜಯಲಕ್ಷ್ಮಿ ತರ ನಾನು ಮದುವೆ ಆಗ್ತಿನಿ, ನನಗೆ ದರ್ಶನ್ ಇಷ್ಟ. ಪರಪ್ಪನ ಅಗ್ರಹಾರಕ್ಕೆ ಹೋದೆ ಅಲ್ಲೂ ಬಿಡಲಿಲ್ಲ. ಈಗ ಇಲ್ಲಿಗೆ ಬಂದಿರುವೆ, ಹಣ್ಣು ಕೊಟ್ಟು ನೋಡಿ ಹೋಗುವೆ. ಚಿಕನ್ ಬೇಕು ಎಂದರೆ ಮಾಡಿ ತರುವೆ ಎಂದು ಪಟ್ಟು ಹಿಡಿದಿರುವ ಅಭಿಮಾನಿ ಲಕ್ಷ್ಮೀ ಪಟ್ಟು ಹಿಡಿದಿದ್ದಾರೆ.
ದರ್ಶನ್ ಏನ್ ತಪ್ಪು ಮಾಡಿದ್ದಾರೆ. ಬೇಕು ಅಂತಾ ಬಳ್ಳಾರಿಗೆ ತಂದು ಹಾಕಿದ್ದಾರೆ ಅಂತಾ ಜೈಲು ಸಿಬ್ಬಂದಿ ಜೊತೆ ಲಕ್ಷ್ಮೀ ವಾಗ್ವಾದ ನಡೆಸಿದ್ದಾರೆ. ದರ್ಶನ್ ನೋಡಲು ಸಂಬಂಧಿಗಳಿಗೆ ಮಾತ್ರ ಅವಕಾಶ ಎಂದಾಗ ನಾನು ಅವನನ್ನು ಮದುವೆ ಆಗೋದಕ್ಕೂ ರೆಡಿಯಾಗಿ ಬಂದಿರುವೆ ಎಂದು ಹೇಳಿದ್ದಾಳೆ.