ನ್ಯಾಯಾಂಗ ಬಂಧನ ಅವಧಿ ಮುಕ್ತಾಯವಾದ ಹಿನ್ನೆಲೆಯಲ್ಲಿ ಪರಪ್ಪನ ಅಗ್ರಹಾರದಿಂದ 13 ಹಾಗೂ ತುಮಕೂರು ಜೈಲಿನಿಂದ 4 ಆರೋಪಿಗಳನ್ನು ವಿಡಿಯೊ ಕಾನ್ಫರೆನ್ಸ್ ಮೂಲಕ ಕೋರ್ಟ್ಗೆ ಹಾಜರುಪಡಿಸಲಾಗಿತ್ತು. ನ್ಯಾಯಾಂಗ ಬಂಧನ ಮುಂದುವರಿಸುವಂತೆ ಪೊಲೀಸರು ಕೋರಿದ್ದರಿಂದ ಕೋರ್ಟ್ ವಿಸ್ತರಣೆ ಮಾಡಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲುಪಾಲಾಗಿರುವ ನಟ ದರ್ಶನ್ ಮತ್ತು ಗ್ಯಾಂಗ್ಗೆ ಆ.28ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆಯಾಗಿದೆ. ಆರೋಪಿಗಳಿಗೆ ನ್ಯಾಯಾಂಗ ಬಂಧನ ಮುಂದುವರಿಸುವಂತೆ ಪೊಲೀಸರು ರಿಮ್ಯಾಂಡ್ ಅರ್ಜಿ ಸಲ್ಲಿಸಿದ್ದರು. ಹೀಗಾಗಿ ಆರೋಪಿಗಳಿಗೆ 24ನೇ ಎಸಿಎಂಎಂ ನ್ಯಾಯಾಲಯದ ಇನ್ಚಾರ್ಜ್ ಕೋರ್ಟ್, ನ್ಯಾಯಾಂಗ ಬಂಧನವನ್ನು ವಿಸ್ತರಿಸಿದೆ. ನ್ಯಾಯಾಂಗ ಬಂಧನ ಅವಧಿ ಮುಕ್ತಾಯವಾದ ಹಿನ್ನೆಲೆಯಲ್ಲಿ ಪರಪ್ಪನ ಅಗ್ರಹಾರದಿಂದ 13 ಹಾಗೂ ತುಮಕೂರು ಜೈಲಿನಿಂದ 4 ಆರೋಪಿಗಳನ್ನು ವಿಡಿಯೊ ಕಾನ್ಫರೆನ್ಸ್ ಮೂಲಕ ನ್ಯಾಯಾಧೀಶ ವಿಶ್ವನಾಥ್ ಸಿ ಗೌಡರ್ ಮುಂದೆ ಹಾಜರು ಪಡಿಸಲಾಗಿತ್ತು. ಆದರೆ, ಆಗಸ್ಟ್ 28ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ ಮಾಡಿರುವುದರಿಂದ ದರ್ಶನ್ ಗ್ಯಾಂಗ್ಗೆ ಸೆರೆವಾಸ ಮುಂದುವರಿದಿದೆ.
ಆರೋಪಿಗಳು ಕೃತ್ಯದಲ್ಲಿ ಭಾಗಿಯಾಗಿರುವುದು ತಾಂತ್ರಿಕ ಸಾಕ್ಷ್ಯಾಧಾರಗಳಿಂದ ಧೃಡ. ರೋಪಿಗಳು ಕೊಲೆಗೆ ಮೊದಲು, ನಂತರ ಪ್ರಭಾವಿಗಳ ಸಂಪರ್ಕ ಹೊಂದಿರೋದು ಬೆಳಕಿಗೆ.ಈ ಸಮಯದಲ್ಲಿ ಜಾಮೀನು ನೀಡಿದರೆ, ಆಮಿಷ ಹಾಗೂ ಬೆದರಿಕೆ ಹಾಕುವ ಸಾದ್ಯತೆ. ಇನ್ನು ಕೆಲವು ಸಾಕ್ಷಿಗಳ 164 ಅಡಿಯಲ್ಲಿ ಹೇಳಿಕೆ ದಾಖಲಿಸಿಕೊಳ್ಳಬೇಕಿದೆ.ಕೆಲವು ವಸ್ತುಗಳ ಎಫ್ಎಸ್ಎಲ್ ವರದಿ ಬಾಕಿ ಇದೆ.ಇನ್ನು ಕೆಲವು ವಶ ಪಡಿಸಿಕೊಂಡ ವಸ್ತುಗಳನ್ನು ಸಿಎಫ್ಎಸ್ಎಲ್ಗೆ ಕಳುಹಿಸಿದ್ದ ವರದಿ ಬರಬೇಕಿದೆ. ಕೊಲೆ ಪ್ರಕರಣದ ಎಲ್ಲಾ ಆರೋಪಿಗಳು ಕೃತ್ಯದಲ್ಲಿ ಭಾಗಿಯಾಗಿರೋದು ತಾಂತ್ರಿಕ ಹಾಗೂ ಭೌತಿಕವಾಗಿ ದೃಢ. ತನಿಖೆ ಪ್ರಗತಿಯಲ್ಲಿದ್ದು ಈ ಸಮಯ ಜಾಮೀನು ನೀಡಿದರೆ ತನಿಖೆಗೆ ಅಡಚಣೆ. ಈ ಕಾರಣಗಳನ್ನ ನೀಡಿ ನ್ಯಾಯಾಂಗ ಬಂಧನ ವಿಸ್ತರಣೆ ಮಾಡಲು ಪೊಲೀಸರು ಮನವಿ ಮಾಡಿದ್ದಾರೆ. ಹೀಗಾಗಿ ಮತ್ತೆ 14 ದಿನ ನ್ಯಾಯಾಂಗ ಬಂಧನವನ್ನು ನ್ಯಾಯಾಧೀಶರು ವಿಸ್ತರಣೆ ಮಾಡಿದ್ದಾರೆ. ಈ ಕಾರಣಗಳನ್ನ ನೀಡಿ ನ್ಯಾಯಾಂಗ ಬಂಧನ ವಿಸ್ತರಣೆ ಮಾಡಲು ಪೊಲೀಸರು ಮನವಿ ಮಾಡಿದ್ದಾರೆ. ಹೀಗಾಗಿ ಮತ್ತೆ 14 ದಿನ ನ್ಯಾಯಾಂಗ ಬಂಧನವನ್ನು ನ್ಯಾಯಾಧೀಶರು ವಿಸ್ತರಣೆ ಮಾಡಿದ್ದಾರೆ.