ವಕ್ಫ್ ಪ್ರತಿಭಟನೆ ಹಿನ್ನೆಲೆ ಮಂಗಳೂರಿನಲ್ಲಿ ಸಂಚಾರ ಮಾರ್ಗ ಬದಲಾವಣೆ

Untitled design 2025 04 18t083735.246

ಮಂಗಳೂರು: ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಏಪ್ರಿಲ್ 18ರಂದು ಮಂಗಳೂರು ನಗರದಲ್ಲಿ ನಡೆಯಲಿರುವ ಭಾರೀ ಪ್ರತಿಭಟನೆ ನಡೆಯಲಿದೆ. ಮಂಗಳೂರು ನಗರ ಪೊಲೀಸ್ ಇಲಾಖೆ ಸಂಚಾರ ದಟ್ಟಣೆ ತಡೆಗಟ್ಟಲು ಹಲವು ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಮಧ್ಯಾಹ್ನ 12 ಗಂಟೆಯಿಂದ ರಾತ್ರಿ 9 ಗಂಟೆವರೆಗೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಕೆಲವು ಪ್ರಮುಖ ಭಾಗಗಳಲ್ಲಿ ಸಂಚಾರ ನಿರ್ಬಂಧ ವಿಧಿಸಲಾಗಿದ್ದು, ಪರ್ಯಾಯ ಮಾರ್ಗಗಳ ಮೂಲಕ ವಾಹನ ಸಂಚಾರ ನಡೆಸುವಂತೆ ಕೋರಲಾಗಿದೆ.

ಪ್ರತಿಭಟನಾ ಸ್ಥಳ ಮತ್ತು ಸಮಯ

ಮಂಗಳೂರಿನ ಅಡ್ಯಾರ್ ಕಣ್ಣೂರಿನ ಷಾ ಗಾರ್ಡನ್ ಮೈದಾನದಲ್ಲಿ ಇಂದು ನಡೆಯಲಿರುವ ಪ್ರತಿಭಟನಾ ಸಮಾವೇಶದ ಹಿನ್ನೆಲೆಯಲ್ಲಿ, ಪಡೀಲ್-ಕಣ್ಣೂರು-ಅಡ್ಯಾರ್-ಸಹ್ಯಾದ್ರಿ-ಅರ್ಕುಳ ಮಾರ್ಗಗಳಲ್ಲಿ ಭಾರೀ ಸಂಚಾರ ದಟ್ಟಣೆ ಸಂಭವಿಸಬಹುದಾಗಿದೆ. ಈ ಹಿನ್ನೆಲೆಯಲ್ಲಿ ವಾಹನ ಸವಾರರು ಪರ್ಯಾಯ ಮಾರ್ಗಗಳ ಬಳಸುವಂತೆ ಸೂಚಿಸಲಾಗಿದೆ.

ADVERTISEMENT
ADVERTISEMENT
ಪರ್ಯಾಯ ಮಾರ್ಗಗಳು ಈ ರೀತಿ ಇವೆ
ಅತ್ಯಗತ್ಯ ಸೇವೆಗಳಿಗೆ ವಿನಾಯಿತಿ

ಸ್ಥಳೀಯ ನಿವಾಸಿಗಳು, ತುರ್ತು ಸೇವೆಗಳು ಮತ್ತು ಇತರ ಅಗತ್ಯ ಕಾರಣಗಳಿಗೆ ಸಂಚರಿಸುವ ವಾಹನಗಳಿಗೆ ವಿನಾಯಿತಿ ನೀಡಲಾಗಿದ್ದು, ಉಳಿದವರಿಗೆ ಪರ್ಯಾಯ ಮಾರ್ಗ ಬಳಸುವ ಅಗತ್ಯವಿದೆ.

ಪೊಲೀಸ್ ಇಲಾಖೆ ಮನವಿ

ಪ್ರತಿಭಟನೆಯಿಂದ ಸಂಭವಿಸಬಹುದಾದ ಸಂಚಾರ ದಟ್ಟಣೆ ತಪ್ಪಿಸಲು ಎಲ್ಲಾ ವಾಹನ ಸವಾರರು ಪೊಲೀಸ್ ಇಲಾಖೆ ನೀಡಿರುವ ಮಾರ್ಗಸೂಚಿಗಳನ್ನು ಪಾಲಿಸಬೇಕು.

 

Exit mobile version